ಮೈಸೂರು: ಪ್ರಧಾನಿ ನರೇಂದ್ರ ಮೋದಿ ಬಿರುಸಿನ ಚುನಾವಣಾ ಪ್ರಚಾರದ ಕಾವೇರಿದ ಹಿನ್ನೆಲೆ ಮಾಜಿ ಸಿಎಂ ಸಿದ್ದರಾಮಯ್ಯ ಗುಂಡ್ಲುಪೇಟೆ, ನಂಜನಗೂಡು ಮತ್ತು ಮೈಸೂರಿನ ವಿವಿಧ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ಮೈಸೂರು ಭಾಗದಲ್ಲಿ ವಿವಿಧ ರ್ಯಾಲಿ ಸಮಾವೇಶ ನಡೆಸಿದರು. ಮೋದಿಯವರ ರ್ಯಾಲಿಯಲ್ಲಿನ ದೊಡ್ಡ ಜನಸ್ತೋಮ ಮತ್ತು ಅವರ ಪ್ರಬಲ ಭಾಷಣವು ಪಕ್ಷದ ಕಾರ್ಯಕರ್ತರನ್ನು ಹುರಿದುಂಬಿಸಿದ್ದು. ಅದರ ಯಶಸ್ಸು ಕಾಂಗ್ರೆಸ್ಸಿಗೆ ಸ್ವಲ್ಪಮಟ್ಟಿನ ಕಸಿವಿಸಿ ಬಿಸಿ ತಾಕಿದೆ.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿನ ಭ್ರಷ್ಟಾಚಾರ, ಅವರ ಸರ್ಕಾರದ ಅಡಿಯಲ್ಲಿ ನೇರ ಹಣ ವರ್ಗಾವಣೆ ಯೋಜನೆ ಮತ್ತು ಬಜರಂಗದಳದ ಮೇಲೆ ಕಾಂಗ್ರೆಸ್ ಪ್ರಸ್ತಾಪಿಸಿದ ನಿಷೇಧದ ವಿಷಯಗಳನ್ನು ಪ್ರಧಾನಿ ಮೋದಿ ಭಾಷಣದ ಮೂಲಕ ಜನರಿಗೆ ತಲುಪಿಸಲು ಪ್ರಯತ್ನಿಸಿದರು. ಸಾರ್ವಜನಿಕ ಪ್ರಚಾರದ ಕೊನೆಯ ದಿನದಂದು ಸಿದ್ದರಾಮಯ್ಯ ತಮ್ಮ ಪಕ್ಷಕ್ಕೆ ಉಂಟಾದ ಹಾನಿಯನ್ನು ತಡೆಯಲು ಮತ್ತು ಮೋದಿ ಎಫೆಕ್ಟ್ ತಗ್ಗಿಸಲು ತಮ್ಮ ಕೈಲಾದಷ್ಟು ಪ್ರಯತ್ನಿಸಿದರು.
Ads by
ಬೆಲೆ ಏರಿಕೆ, ನಿರುದ್ಯೋಗ ಹಾಗೂ ಸರ್ಕಾರದ ಶೇ.40ರಷ್ಟು ಭ್ರಷ್ಟಾಚಾರದ ಬಗ್ಗೆ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿ ಸರಕಾರ ಕಾರ್ಪೊರೇಟ್ ಕಂಪನಿಗಳ 12 ಲಕ್ಷ ಕೋಟಿ ಸಾಲ ಮನ್ನಾ ಮಾಡಿದೆ ಆದರೆ ರೈತರ ಸಮಸ್ಯೆ ನಿವಾರಣೆಗೆ ಏನೂ ಮಾಡಿಲ್ಲ ಎಂದರು. ‘ಬಿಜೆಪಿ ಅಧಿಕಾರಕ್ಕೆ ಬಂದರೆ ಕಮಿಷನ್ ಶೇ.40ರಿಂದ 80ಕ್ಕೆ ಏರಬಹುದು’ ಎಂದು ಮತದಾರರಿಗೆ ಎಚ್ಚರಿಕೆ ನೀಡಿದರು.
ಸರ್ಕಾರದ ಯೋಜನೆಯಡಿ ಮನೆ ಕೊಡಿ ಎಂದು ಕೇಳುತ್ತಿದ್ದ ಮಹಿಳೆಗೆ ಕಪಾಳಮೋಕ್ಷ ಮಾಡಿದ ವಸತಿ ಸಚಿವ ವಿ.ಸೋಮಣ್ಣ ಅವರಿರುವ ಸರ್ಕಾರದಿಂದ ಏನನ್ನು ನಿರೀಕ್ಷಿಸಲು ಸಾಧ್ಯ ಎಂದರು. ನಂತರನಂಜನಗೂಡಿನಲ್ಲಿ ಮಾತನಾಡಿದ ಅವರು, ವಿಧಾನಸಭೆಯಲ್ಲಿ ಸೂಕ್ತ ವಿಷಯಗಳನ್ನು ಪ್ರಸ್ತಾಪಿಸಲು ವಿಫಲರಾದ ಕಾರ್ಯನಿರ್ವಹಣೆ ಮಾಡದ ಬಿಜೆಪಿ ಶಾಸಕ ಹರ್ಷವರ್ಧನ್ ಅವರಿಗೆ ಮತ ಹಾಕಬೇಕೆ ಎಂದು ಜನರನ್ನು ಪ್ರಶ್ನಿಸಿದರು.
ಆರ್. ದ್ರುವನಾರಾಯಣ್ ಅವರಂತಹ ಕಾರ್ಯಪ್ರವೃತ್ತರ ಸೋಲು ಮತ್ತು ನಿಧನ ಕಾಂಗ್ರೆಸ್ ಗೆ ದೊಡ್ಡ ನಷ್ಟವಾಗಿದ್ದು, ಹಣಬಲ ಮತ್ತು ಜನಬಲದ ನಡುವೆ ಚುನಾವಣೆ ನಡೆಯುತ್ತಿದೆ ಎಂದರು. ಒಂದೇ ತಿಂಗಳ ಅವಧಿಯಲ್ಲಿ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡಿರುವ ದರ್ಶನ್ ದ್ರುವನಾರಾಯಣ್ ಅವರನ್ನು ಬೆಂಬಲಿಸುವಂತೆ ಅವರು ಜನರಿಗೆ ಕರೆ ನೀಡಿದರು.
ಕಾಂಗ್ರೆಸ್ ಅಧಿಕಾರ ಸ್ವೀಕರಿಸಿದ ನಂತರ ಚುನಾವಣಾ ಪೂರ್ವ ಭರವಸೆಗಳನ್ನು ಜಾರಿಗೆ ತರಲಿದೆ ಎಂದು ಹೇಳಿದ ಸಿದ್ದರಾಮಯ್ಯ, ಮೋದಿಯವರಿಗೆ ರಾಜ್ಯದ ಹಣಕಾಸಿನ ಬಗ್ಗೆ ಯಾವುದೇ ಅರಿವಿಲ್ಲ ಎಂದು ಆರೋಪಿಸಿದರು. ಚಾಮುಂಡೇಶ್ವರಿಯಲ್ಲಿ 2018ರಲ್ಲಿ ತನ್ನನ್ನು ಸೋಲಿಸಿದ ಬದ್ಧ ವೈರಿ ಜಿಟಿ ದೇವೇಗೌಡರನ್ನು ಸೋಲಿಸುವಂತೆ ಸಿದ್ದರಾಮಯ್ಯ ಕರೆ ನೀಡಿದರು.
ಚಾಮರಾಜ ಮತ್ತು ಕೃಷ್ಣರಾಜ ಕ್ಷೇತ್ರಗಳಲ್ಲಿಯೂ ಸಿದ್ದರಾಮಯ್ಯ ಪ್ರಚಾರ ನಡೆಸಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ಬಿಜೆಪಿ ನಾಯಕರುಗಳು ಪ್ರಚಾರ ನಡೆಸಿದ್ದಾರೆ.
ಬರುತ್ತಿದೆ ಅಯೋಧ್ಯ ರಾಮನ "ಬಯೋ ಪಿಕ್"…
ವಿಶ್ವ ದಾಖಲೆ ನಿರ್ಮಿಸಿದ ಭಾರತೀಯ ಬಾಲಕಿ…
ವಿಮಾನದಲ್ಲಿ ನಮಾಜ್
ಬಿಡುಗಡೆಯಾಗಿದೆ, ಜಗತ್ತಿನ ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿ
ನಟಿ ಹರ್ಷಿಕ ಪೂರ್ಣಚ್ಚ ಹಾಗೂ ನಟ ಭುವನ್ ಮೇಲೆ ಹಲ್ಲೆ.
ಶಿಲ್ಪಾ ಶೆಟ್ಟಿ ರಾಜ್ ಕುಂದ್ರಾಗೆ ಎದುರಾಗಿದೆ ಸಂಕಷ್ಟ
ಮತದಾನದ ನಂತರ ಸಾವನಪ್ಪಿದ ವೃದ್ಧ….
ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ…
ಜೈ ಶ್ರೀ ರಾಮ್ ಎಂದು ಕೂಗಿದ್ದಕ್ಕೆ, ಮುಸ್ಲಿಂ ಯುವಕರಿಂದ ಹಲ್ಲೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.