ಕಾರವಾರ: ಚುನಾವಣಾ ಮತಪ್ರಚಾರ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ಇಂದು ಉತ್ತರಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದ ವೇಳೆ ಹಾಲಕ್ಕಿ ಸಮುದಾಯದ ಪದ್ಮಶ್ರೀ ಪುರಸ್ಕೃತ ಸುಕ್ರಿ ಗೌಡ, ತುಳಸಿ ಗೌಡ ಅವರನ್ನು ಭೇಟಿಯಾಗಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಟ್ಟಿಕೇರಿಯಲ್ಲಿ ಆಯೋಜಿಸಲಾಗಿರುವ ಬಿಜೆಪಿ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಿದ್ದು, ಈ ವೇಳೆ ಪದ್ಮ ಪ್ರಶಸ್ತಿ ಪುರಸ್ಕೃತರನ್ನು ಭೇಟಿಯಾದರು.
ಸಮಾರಂಭಕ್ಕೂ ಮೊದಲು ಪದ್ಮ ಪ್ರಶಸ್ತಿ ಪುರಸ್ಕೃತರಾದ ತುಳಸಿ ಗೌಡ ಮತ್ತು ಸುಕ್ರಿ ಬೊಮ್ಮಗೌಡ ಅವರನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಗೌರವಪೂರ್ವಕ ನಮನ ಸಲ್ಲಿಸಿದರು.
ಹಾಲಕ್ಕಿ ಸಮುದಾಯಕ್ಕೆ ಸೇರಿದ ಈ ಮಹಾನ್ ಮಹಿಳೆಯರ ಸಾಧನೆ ಪರಿಸರ ಕಾಳಜಿ, ಜಾನಪದ ಗಾಯನಲ್ಲಿ ಮಟ್ಟಿ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರಗಳಲ್ಲಿ ಒಂದಾದ ಪದ್ಯ ಪ್ರಶಸ್ತಿಯನ್ನು ಭಾರತ ಸರ್ಕಾರ ಗೌರವಿಸಿದೆ.














