ಮನೆ ರಾಜಕೀಯ ನ.20 ರಂದು ಬಿಜೆಪಿ ಎಸ್‌’ಟಿ ಮೋರ್ಚಾದಿಂದ ‘ನವಶಕ್ತಿ ಸಮಾವೇಶ’

ನ.20 ರಂದು ಬಿಜೆಪಿ ಎಸ್‌’ಟಿ ಮೋರ್ಚಾದಿಂದ ‘ನವಶಕ್ತಿ ಸಮಾವೇಶ’

0

ಬೆಂಗಳೂರು(Bengaluru): ಬಿಜೆಪಿ ಎಸ್‌’ಟಿ ಮೋರ್ಚಾದ ವತಿಯಿಂದ ‘ನವಶಕ್ತಿ ಸಮಾವೇಶ’ನವೆಂಬರ್ 20 ರಂದು ಬಳ್ಳಾರಿಯಲ್ಲಿ ನಡೆಯಲಿದೆ ಎಂದು ಎಸ್‌.ಟಿ ಮೋರ್ಚಾ ರಾಜ್ಯಾಧ್ಯಕ್ಷ ತಿಪ್ಪರಾಜು ಹವಾಲ್ದಾರ್‌ ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಈ ಕಾರ್ಯಕ್ರಮವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಉದ್ಘಾಟಿಸಲಿದ್ದು, ಸಮಾವೇಶದಲ್ಲಿ 10 ಲಕ್ಷ ಜನ ಭಾಗವಹಿಸುವ ನಿರೀಕ್ಷೆ ಇದೆ ಎಂದು ಹೇಳಿದರು.

ಈ ಸಮಾವೇಶದಲ್ಲಿ ಎಲ್ಲ ಎಸ್‌ಟಿ ಸಮುದಾಯದವರು ಭಾಗವಹಿಸಿ ಮೀಸಲಾತಿ ಹೆಚ್ಚಳಕ್ಕೆ ಸಂತಸ ಸೂಚಿಸಿ, ವಿಜಯೋತ್ಸವ ಆಚರಿಸಲಿದ್ದಾರೆ. 68 ಕ್ಕೂ ಹೆಚ್ಚು ಬುಡಕಟ್ಟು ಕಲಾ ತಂಡಗಳು ಪಾಲ್ಗೊಳ್ಳಲಿವೆ. ಕೊಪ್ಪಳ, ರಾಯಚೂರು, ಯಾದಗಿರಿ, ಚಿತ್ರದುರ್ಗ, ಬಳ್ಳಾರಿ, ಹಳೆ ಮೈಸೂರು, ಮಧ್ಯಕರ್ನಾಟಕದ ಸುತ್ತಲಿನ ಪ್ರದೇಶಗಳಿಂದ ಆರು ಲಕ್ಷ ಜನರನ್ನು ನಿರೀಕ್ಷಿಸಲಾಗಿದೆ. ರಾಜ್ಯದ ಇತರ ಜಿಲ್ಲೆಗಳಿಂದ 4 ಲಕ್ಷ ಜನ ಭಾಗವಹಿಸುವ ನಿರೀಕ್ಷೆ ಇದೆ. ಇದಕ್ಕಾಗಿ 6,200 ಬಸ್‌ ವ್ಯವಸ್ಥೆ ಮಾಡಲಾಗಿದ್ದು, 15 ರಿಂದ 18 ಸಾವಿರ ಕ್ರೂಸರ್‌ ವಾಹನಗಳ ವ್ಯವಸ್ಥಡ ಮಾಡಲಾಗಿದೆ. ಬಳ್ಳಾರಿಯಲ್ಲಿ 28 ಕಡೆಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ನವಶಕ್ತಿ ಸಮಾವೇಶದಲ್ಲಿ ಕೇಂದ್ರ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಅರ್ಜುನ್ ಮುಂಡಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ, ಪಕ್ಷದ ರಾಜ್ಯ ಘಟಕದ ಅದ್ಯಕ್ಷ ನಳಿನ್‌ಕುಮಾರ್ ಕಟೀಲ್‌ ಅವರು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.

ಹಿಂದಿನ ಲೇಖನಬದುಕು ಬದಲಿಸುವ ನಡವಳಿಕೆ
ಮುಂದಿನ ಲೇಖನಸುಪ್ರೀಂ ಕೋರ್ಟ್’ನ ಕೆಲ ವಕೀಲರಿಗೆ ವಿವಿಧ ಹೈಕೋರ್ಟ್’ಗಳ ನ್ಯಾಯಮೂರ್ತಿಗಳಾಗಿ ಪದೋನ್ನತಿ ನೀಡಲು ಚಿಂತನೆ: ಸಿಜೆಐ