ಉತ್ತರ ಪ್ರದೇಶ : ಉತ್ತರ ಪ್ರದೇಶದ ಸಿಎಂ ಮತ್ತು ಬಿಜೆಪಿ ಹಿರಿಯ ನಾಯಕ ಯೋಗಿ ಆದಿತ್ಯನಾಥ್ ಇಂದು ಬಿಹಾರದಲ್ಲಿ ಚುನಾವಣಾ ರ್ಯಾಲಿ ನಡೆಸಿದರು. ಈ ವೇಳೆ ಅವರು ಬಿಹಾರದಲ್ಲಿ ಎನ್ಡಿಎ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನವೆಂಬರ್ 6ರಂದು ಮೊದಲ ಹಂತದ ಚುನಾವಣೆ ನಡೆದರೆ, ಎರಡನೇ ಹಂತದ ಚುನಾವಣೆ ನವೆಂಬರ್ 11ರಂದು ನಡೆಯಲಿದೆ. ನವೆಂಬರ್ 14ರಂದು ಫಲಿತಾಂಶ ಪ್ರಕಟವಾಗಲಿದೆ. ಮೋತಿಹಾರಿ ರ್ಯಾಲಿಯಲ್ಲಿ ಸಭೆ ಸೇರಿದವರನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಯೋಗಿ ಆದಿತ್ಯನಾಥ್ ಆರ್ಜೆಡಿ ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಿಹಾರವು ತನ್ನದೇ ಆದ ಅದ್ಭುತ ಇತಿಹಾಸವನ್ನು ಹೊಂದಿದೆ. ಇದು ನಳಂದ ವಿಶ್ವವಿದ್ಯಾಲಯವನ್ನು ನೀಡಿದ ರಾಜ್ಯ. ಆರ್ಯಭಟ ಮತ್ತು ಆಚಾರ್ಯ ಚಾಣಕ್ಯನನ್ನು ನೀಡಿದ ರಾಜ್ಯವಾಗಿದೆ.
ಗೌತಮ ಬುದ್ಧನಿಗೆ ಜ್ಞಾನೋದಯ ಮಾಡಿದ ರಾಜ್ಯ. 24 ತೀರ್ಥಂಕರರ ಜನ್ಮಸ್ಥಳವಾದ ರಾಜ್ಯ. ಈ ರಾಜ್ಯವು ಸಾಕ್ಷರತೆಯ ವಿಷಯದಲ್ಲಿ ಅತ್ಯಂತ ಕೆಳಮಟ್ಟಕ್ಕೆ ಇಳಿಯಲು ಆರ್ಜೆಡಿ ಮತ್ತು ಕಾಂಗ್ರೆಸ್ ಕಾರಣ ಎಂದು ಟೀಕಿಸಿದ್ದಾರೆ.















