ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ (ಎನ್’ಡಿಪಿಎಸ್) ಕಾಯಿದೆ ಅಡಿ ದಾಖಲಾದ ಪ್ರಕರಣಗಳಲ್ಲಿ ಗಾಂಜಾ ಪ್ರಮಾಣ ನಿರ್ಧರಿಸುವಾಗ ಬೀಜ, ಎಲೆ ತೂಕವನ್ನೂ ಪರಿಗಣಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಈಚೆಗೆ ಆದೇಶದಲ್ಲಿ ಹೇಳಿದೆ.
ಎನ್’ಡಿಪಿಎಸ್ ಕಾಯಿದೆಯ ವಿವಿಧ ಸೆಕ್ಷನ್’ಗಳ ಅಡಿ ಗಾಂಜಾ ಹೊಂದಿದ್ದ ಆರೋಪ ಎದುರಿಸುತ್ತಿದ್ದ ದಾವಣಗೆರೆಯ ಜಿಲ್ಲೆಯ ಚನ್ನಗಿರಿಯ ಕಾಶೆಟ್ಟಿಹಳ್ಳಿಯ 73 ವರ್ಷದ ರಂಗಪ್ಪ ಅವರ ವಿರುದ್ಧದ ಪ್ರಕರಣ ರದ್ದುಪಡಿಸಲು ನ್ಯಾಯಮೂರ್ತಿ ಕೆ ನಟರಾಜನ್ ಅವರಿದ್ದ ಏಕ ಸದಸ್ಯಪೀಠ ನಿರಾಕರಿಸಿದೆ.
“ಎನ್’ಡಿಪಿಎಸ್ ಕಾಯಿದೆ ಸೆಕ್ಷನ್2 (2)(ಬಿ) ಅಡಿ ವ್ಯಾಖ್ಯಾನವನ್ನು ಓದಿದರೆ ಗಾಂಜಾದಲ್ಲಿ ಬೀಜಗಳು ಮತ್ತು ಹೂವುಗಳನ್ನು ಹೊರಗಿಡಲಾಗಿದೆ. ಆದರೆ ಪಂಚನಾಮೆ ವರದಿಯಲ್ಲಿ ಅರ್ಜಿದಾರರಿಂದ ವಶಪಡಿಸಿಕೊಂಡಿರುವ ಗಾಂಜಾದ ಜತೆ ಬೀಜ, ಹೂವು ಮತ್ತು ಎಲೆ ಕೂಡ ಸೇರಿದೆ. ಆದ್ದರಿಂದ ಅವುಗಳ ತೂಕವನ್ನೂ ಸಹ ಪರಿಗಣಿಸಬೇಕಾಗುತ್ತದೆ’’ ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ.
ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯು ಅರ್ಜಿದಾರರ ವಿರುದ್ದ ಇರುವ ಹಿನ್ನೆಲೆಯಲ್ಲಿ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಲಾಗದು. ಅರ್ಜಿದಾರರ ಜಾಮೀನು ಅರ್ಜಿ ಪರಿಗಣಿಸಬೇಕಾದರೂ ಗಾಂಜಾದ ವಾಣಿಜ್ಯ ಪ್ರಮಾಣ ಪರಿಗಣಿಸಬೇಕಾಗುತ್ತದೆ. ವಶಪಡಿಸಿಕೊಂಡ ಗಾಂಜಾ ತೂಕ ನಿರ್ಧರಿಸುವಾಗ ಗಾಂಜಾ ಗಿಡದ ಬೀಜ, ಎಲೆ, ಹೂವುಗಳ ತೂಕವನ್ನೂ ಸೇರಿಸಬೇಕು. ಆ ರೀತಿ ಸೇರಿಸಿದರೆ ಗಾಂಜಾ ಪ್ರಮಾಣ ನಿಗದಿತ ಮಿತಿಗಿಂತ ಜಾಸ್ತಿ ಇದೆ. ಹೀಗಾಗಿ, ಜಾಮೀನನ್ನೂ ನೀಡಲಾಗದು ಎಂದು ಆದೇಶದಲ್ಲಿ ಹೇಳಿದೆ.
2019ರಲ್ಲಿ ದಾವಣಗೆರೆಯ ಬಸವಪಟ್ಟಣ ಪೊಲೀಸರು ರಂಗಪ್ಪ ಅವರನ್ನು ಬಂಧಿಸಿ 750 ಗ್ರಾಂ ಗಾಂಜಾ ವಶಪಡಿಸಿಕೊಂಡು ಎನ್ಡಿಪಿಎಸ್ ಕಾಯಿದೆ ಸೆಕ್ಷನ್’ಗಳಾದ 20(ಎ)(ಐ), 20(ಬಿ)(ii)(ಎ) ಅಡಿ ಅಡಿ ಪ್ರಕರಣ ದಾಖಲಿಸಿದ್ದರು.
ಆರೋಪಿ ರಂಗಪ್ಪ ಗಾಂಜಾ ಗಿಡದ ಬೀಜ, ಎಲೆಯನ್ನು ತೂಕಕ್ಕೆ ಪರಿಗಣಿಸಬಾರದು. ಅವುಗಳನ್ನು ಪರಿಗಣಿಸದಿದ್ದರೆ ವಶಪಡಿಸಿಕೊಂಡಿರುವ ಗಾಂಜಾ ಪ್ರಮಾಣ ಎನ್’ಡಿಪಿಎಸ್ ಕಾಯಿದೆ ವ್ಯಾಪ್ತಿಗೆ ಬರುವುದಿಲ್ಲ. ಹೀಗಾಗಿ, ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದನ್ನು ಪೀಠವು ಮಾನ್ಯ ಮಾಡಿಲ್ಲ.