ಮನೆ ರಾಜ್ಯ ಚೈತ್ರಾ ಕುಂದಾಪುರಳಿಗೂ, ನಮಗೂ ಸಂಬಂಧವಿಲ್ಲ ಇಲ್ಲ: ವಿಶ್ವ ಹಿಂದೂ ಪರಿಷತ್

ಚೈತ್ರಾ ಕುಂದಾಪುರಳಿಗೂ, ನಮಗೂ ಸಂಬಂಧವಿಲ್ಲ ಇಲ್ಲ: ವಿಶ್ವ ಹಿಂದೂ ಪರಿಷತ್

0

ಮಂಗಳೂರು(ದಕ್ಷಿಣ ಕನ್ನಡ): ಚೈತ್ರಾ ನಮ್ಮ ಸಂಘಟನೆಯಲ್ಲಿ ಇದ್ದಾಳೆ ಎಂದು ಯಾರು ಹೇಳಿದ್ದು..? ಚೈತ್ರಾ ಕುಂದಾಪುರಳಿಗೂ ನಮಗೂ ಸಂಬಂಧವಿಲ್ಲ ಇಲ್ಲ ಎಂದು ಮಂಗಳೂರಿನ ಕದ್ರಿಯಲ್ಲಿ ವಿಶ್ವ ಹಿಂದೂ ಪರಿಷತ್ ನ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಹೇಳಿದ್ದಾರೆ.

ಕದ್ರಿಯ ವಿಶ್ವ ಹಿಂದೂ ಪರಿಷತ್ ವಿಶ್ವಶ್ರೀಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,  ಚೈತ್ರಾ ಕುಂದಾಪುರ ಚೆನ್ನಾಗಿ ಭಾಷಣ ಮಾಡುತ್ತಾಳೆ ಎಂದು ನಮ್ಮ ಕಾರ್ಯಕ್ರಮಕ್ಕೆ ಕರೆಯುತ್ತಿದ್ದದ್ದು ಹೌದು. ಈ ಪ್ರಕರಣದಲ್ಲಿ ಯಾರು ತಪ್ಪು ಮಾಡಿದ್ರೂ ಶಿಕ್ಷೆ ಆಗಲೇಬೇಕು.  ಇಂತಹ ಪ್ರಕರಣಗಳಿಗೆ ವಿಶ್ಚಹಿಂದೂ ಪರಿಷತ್, ಭಜರಂಗದಳ ಬೆಂಬಲ ನೀಡಲ್ಲ ಎಂದರು.

ಇನ್ನು ಈ ಕುರಿತು ನನ್ನತ್ರ ಗುರುಪುರ ಸ್ವಾಮೀಜಿ ಹೇಳಿದ್ದರು. ಆಗ ನಾನು ನಿಮ್ಮ ತಪ್ಪು ಇಲ್ವಲ್ಲ ಎಂದು ಕೇಳಿದ್ದೆ. ಇಂತಹ ಪ್ರಕರಣ ಎಲ್ಲಿಯೂ ನಡೆಯಬಾರದು ಎಂದರು.

ಬಜರಂಗದಳ ವಿಎಚ್ ಪಿ ನೇತೃತ್ವದಲ್ಲಿ ಸೆಪ್ಟೆಂಬರ್25 ರಿಂದ ರಾಜ್ಯಾದ್ಯಂತ ಶೌರ್ಯ ಜಾಗರಣ ರಥಯಾತ್ರೆ ನಡೆಯಲಿದೆ. ಸನಾತನ ಧರ್ಮವನ್ನು ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ. ಪೂರ್ವಜರ ಶೌರ್ಯ, ಪರಾಕ್ರಮ ಬಲಿದಾನಗಳನ್ನು ನೆನಪಿಸುವ ಕಾರ್ಯ ಮಾಡಬೇಕಾಗಿದೆ. ರಥಯಾತ್ರೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಹೋಗುತ್ತದೆ. ಸೆಪ್ಟೆಂಬರ್ 25 ಕ್ಕೆ ಚಿತ್ರದುರ್ಗದಲ್ಲಿ ರಥಯಾತ್ರೆ ಉದ್ಘಾಟನೆಗೊಳ್ಳಲಿದೆ. ಅಕ್ಟೋಬರ್ 10 ಕ್ಕೆ ಉಡುಪಿಯಲ್ಲಿ ಹಿಂದೂ ಸಮಾಜೋತ್ಸವದ ಮೂಲಕ ಸಮಾರೋಪಗೊಳ್ಳಲಿದೆ ಅಂದರು. ಲವ್ ಜಿಹಾದ್, ಗೋಹತ್ಯೆ ತಡೆಯಲು ರಥಯಾತ್ರೆ ಮಹತ್ವ ಪಡೆಯಲಿದೆ ಎಂದರು.

ಇನ್ನು ಬಜರಂಗದಳವನ್ನು ಬ್ಯಾನ್ ಮಾಡಲು ಸಾಧ್ಯವೇ ಇಲ್ಲ. ಬಜರಂಗದಳ ಸಮಾಜ ವಿರೋಧಿ ಕೆಲಸ ಮಾಡಿಲ್ಲ. ಒಂದು ವರ್ಷದ ಒಳಗಡೆ ಐದು ಸಾವಿರ ಬಜರಂಗದಳದ ಘಟಕ ನಿರ್ಮಾಣ ಮಾಡುತ್ತೇವೆ ಎಂದರು.

ಹಿಂದಿನ ಲೇಖನವಂಚನೆ ಪ್ರಕರಣ: 8 ಮಂದಿ ಆರೋಪಿಗಳ ಬಂಧನ, 2 ಕೋಟಿಗೂ ಹೆಚ್ಚು ಹಣ ಜಪ್ತಿ- ಪೊಲೀಸ್ ಕಮೀಷನರ್ ಬಿ.ದಯಾನಂದ್ ಮಾಹಿತಿ
ಮುಂದಿನ ಲೇಖನಸುಪ್ರೀಕೋರ್ಟ್ ಆದೇಶಕ್ಕೆ ವಿರೋಧ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ- ವಿವಿಧೆಡೆ ಪ್ರತಿಭಟನೆ