ನವದೆಹಲಿ: ಜೈಲಿನಲ್ಲಿರುವ ಕಾಶ್ಮೀರಿ ನಾಯಕ ಎಂಜಿನಿಯರ್ ರಶೀದ್ ಎಂದೇ ಖ್ಯಾತರಾಗಿರುವ ಶೇಖ್ ಅಬ್ದುಲ್ ರಶೀದ್ ಜುಲೈ 25ರಂದು ಸಂಸದರಾಗಿ ಪ್ರಮಾಣವಚನ ಸ್ವೀಕರಿಸಲು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಸಮ್ಮತಿ ಸೂಚಿಸಿದೆ.
ಈ ಕುರಿತ ಆದೇಶವನ್ನು ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಚಂದೇರ್ ಜಿತ್ ಸಿಂಗ್ ನಾಳೆ ಪ್ರಕಟಿಸಲಿದ್ದಾರೆ.
ಪಕ್ಷೇತರ ಸಂಸದನಾಗಿ ಬಾರಾಮುಲ್ಲಾ ಕ್ಷೇತ್ರದಿಂದ ಆಯ್ಕೆಯಾಗಿರುವ ರಶೀದ್, 2017ರ ಭಯೋತ್ಪಾದನೆ ಆರ್ಥಿಕ ನೆರವು ನೀಡಿದ ಪ್ರಕರಣದಲ್ಲಿ ಜೈಲಿನಲ್ಲಿದ್ದಾರೆ. ತಮ್ಮ ಸಂಸದೀಯ ಕೆಲಸಗಳನ್ನು ನಿರ್ವಹಿಸಲು ಮಧ್ಯಂತರ ಜಾಮೀನು ಅಥವಾ ಪೆರೋಲ್ ನೀಡುವಂತೆ ಅವರು ಕೋರ್ಟ್ ಮೆಟ್ಟಿಲೇರಿದ್ದರು. ಜೂನ್ 22 ರಂದು ಪ್ರಕರಣದ ವಿಚಾರಣೆ ಮುಂದೂಡಿದ್ದ ವಿಶೇಷ ನ್ಯಾಯಾಲಯ, ಪ್ರತಿಕ್ರಿಯೆ ಸಲ್ಲಿಸುವಂತೆ ಎನ್ಐಎಗೆ ಸೂಚಿಸಿತ್ತು.
ಈ ಸಂಬಂಧ ಪ್ರತಿಕ್ರಿಯಿಸಿರುವ ಎನ್ಐಎ ವಕೀಲರು, ರಶೀದ್ ಪ್ರಮಾಣವಚನ ಸ್ವೀಕಾರಕ್ಕೆ ನೀಡಲಾಗಿರುವ ಅನುಮತಿಯು ಮಾಧ್ಯಮಗಳ ಜೊತೆ ಮಾತನಾಡಬಾರದು ಎಂಬ ಷರತ್ತು ಸೇರಿದಂತೆ ಕೆಲವು ಷರತ್ತುಗಳನ್ನು ಒಳಗೊಂಡಿದೆ. ತಿಹಾರ್ ಜೈಲಿನಲ್ಲಿರುವ ರಶೀದ್, ಎಲ್ಲ ಚಟುವಟಿಕೆಗಳನ್ನು ಒಂದೇ ದಿನದಲ್ಲಿ ಪೂರ್ಣಗೊಳಿಸಬೇಕಿದೆ.
ಭಯೋತ್ಪಾದನೆ ಹಣಕಾಸಿನ ನೆರವು ನೀಡಿದ ಆರೋಪದ ಹಿನ್ನೆಲೆ ರಶೀದ್ ಮೇಲೆ ಎನ್ಐಎ ಯುಎಪಿಎ ಕಾಯ್ದೆ ಅಡಿ ಪ್ರಕರಣ ದಾಖಲಿಸಿರುವುದರಿಂದ 2019ರಿಂದ ಅವರು ಜೈಲಿನಲ್ಲಿದ್ದಾರೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
ITBT ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆರ್ಜಿ ಸ್ವೀಕಾರ..!
'ಓಲ್ಡ್ ಈಸ್ ಗೋಲ್ಡ್' ಕರೋಕೆ ಗಾಯನ ಕಾರ್ಯಕ್ರಮ
ಅಪ್ಪ ಅಮ್ಮ ಅಪ್ಪು, ಎಂಬ ಚಿತ್ರದ ಧ್ವನಿಸುರುಳಿ ಬಿಡುಗಡೆ
ಭಾರತೀಯ ನ್ಯಾಯ ಸಮಿತಿ 2023 ಜುಲೈ 1, 2024 ರಿಂದ ಜಾರಿ!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.