ಮನೆ ಅಂತಾರಾಷ್ಟ್ರೀಯ ತಮಿಳುನಾಡು, ಕೇರಳ ಮತ್ತು ಕರ್ನಾಟಕದ 40 ಪ್ರದೇಶಗಳ ಮೇಲೆ ಎನ್’ಐಎ ದಾಳಿ

ತಮಿಳುನಾಡು, ಕೇರಳ ಮತ್ತು ಕರ್ನಾಟಕದ 40 ಪ್ರದೇಶಗಳ ಮೇಲೆ ಎನ್’ಐಎ ದಾಳಿ

0

ನವದೆಹಲಿ: ಕೊಯಮುತ್ತೂರು ಮತ್ತು ಮಂಗಳೂರು ಬ್ಲಾಸ್ಟ್​ ಪ್ರಕರಣಕ್ಕೆ ಸಂಬಧಿಸಿದಂತೆ ತಮಿಳುನಾಡು, ಕೇರಳ ಮತ್ತು ಕರ್ನಾಟಕದ 40 ಪ್ರದೇಶಗಳ ಮೇಲೆ ಏಕಕಾಲಕ್ಕೆ ರಾಷ್ಟ್ರೀಯ ತನಿಖಾ ದಳ (ಎನ್’​ಐಎ) ಅಧಿಕಾರಿಗಳು ದಾಳಿ ಮಾಡಿದ್ದಾರೆ.

ದಾಳಿಯಲ್ಲಿ ಎಲೆಕ್ಟ್ರಾನಿಕ್​ ಡಿವೈಸ್​​ಗಳು​ ಮತ್ತು ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ತಮಿಳುನಾಡಿನ ಕೊಯಮುತ್ತೂರನ ಕೊಟ್ಟಯ್​ ಈಶ್ವರನ್​ ದೇವಸ್ಥಾನ ಎದುರುಗಡೆ ಸ್ಪೋಟಗೊಂಡ ಕಾರ್​ ಬ್ಲಾಸ್ಟ್​​’ನಲ್ಲಿ ಜಮೀಶ್​ ಮುಬೀನ್ ಎಂಬುವನು ಸಾವನ್ನಪ್ಪಿದ್ದನು. ಜಾಗತಿಕ ಭಯೋತ್ಪಾದಕ ಸಂಘಟನೆಯಾದ ಇಸ್ಲಾಮಿಕ್ ಸ್ಟೇಟ್‌ ಜೊತೆ ಜಮೀಶ್​ ಮುಬೀನ್ ನಂಟು ಹೊಂದಿದ್ದು. ಈತ ಆತ್ಮಾಹುತಿ ಬಾಂಬ್’​ಗೆ ಧಾರ್ಮಿಕ ಕೇಂದ್ರಗಳು ಮತ್ತು ಸ್ಮಾರಕಗಳನ್ನು ಟಾರ್ಗೆಟ್​ ಮಾಡಿದ್ದನು ಎಂದು ಎನ್‌ಐಎ ಹೇಳಿದೆ.

ಈ ಪ್ರಕರಣದಲ್ಲಿ 6 ಮಂದಿಯನ್ನು ಬಂಧಿಸಲಾಗಿದೆ. ಅಧಿಕಾರಿಗಳು ಸ್ಫೋಟವನ್ನು “ಲೋನ್ ವುಲ್ಫ್” ದಾಳಿ ಎಂದು ಕರೆದಿದ್ದಾರೆ.

ಇನ್ನೂ ಮಂಗಳೂರಿನಲ್ಲಿ ನಡೆದ ಆಟೋ ಬಾಂಬ್​ ಬ್ಲಾಸ್ಟ್​ ಪ್ರಕರಣದಲ್ಲಿ ಆಟೋ ಚಾಲಕ ಮತ್ತು ಆರೋಪಿ ಮೊಹ್ಮದ್​ ಶಾರಿಕ್​ ಇಬ್ಬರು ಗಾಯಗೊಂಡಿದ್ದರು. ಸ್ಫೋಟ ಪ್ರಕರಣದ ತನಿಖೆಯ ಸಂದರ್ಭದಲ್ಲಿ, ಶಾರಿಕ್ ಮತ್ತು ಆತನ ಸಹಚರರು ಕರ್ನಾಟಕದ ಅರಣ್ಯಗಳಲ್ಲಿ ಇಸ್ಲಾಮಿಕ್ ಸ್ಟೇಟ್ ಕ್ಯಾಂಪ್ ಸ್ಥಾಪಿಸಲು ಬಯಸಿದ್ದರು ಎಂದು ಎನ್ಐಎಗೆ ತಿಳಿದುಬಂದಿದೆ.

ಅಲ್ಲದೇ ಮಂಗಳೂರು ಸುತ್ತಮುತ್ತಲಿನ ಕಾಡಿನಲ್ಲಿ ಮೊಹ್ಮದ್​ ಶಾರಿಕ್​ ಮತ್ತು ಆತನ ಸಹಚರರು ಇಸ್ಲಾಮಿಕ್ ಸ್ಟೇಟ್‌ ಕ್ಯಾಂಪ್​’ನ್ನು ಹೂಡಿದ್ದು, ಅಲ್ಲಿ ಮೊಹ್ಮದ್​ ಶಾರಿಕ್ ತರಬೇತಿ ಪಡೆದಿದ್ದನು ಎಂದು ಎನ್​ಐಎ ಹೇಳಿದೆ.

ಹಿಂದಿನ ಲೇಖನರಾಜ್ಯ ಸರ್ಕಾರದಿಂದ ಟೆಂಡರ್ ಗೋಲ್ ಮಾಲ್: ಡಿಕೆಶಿ ಗಂಭೀರ ಆರೋಪ
ಮುಂದಿನ ಲೇಖನಟೆಂಡರ್ ಹಣ ದುಪ್ಪಟ್ಟು: ಸಿವಿಲ್, ಕ್ರಿಮಿನಲ್ ಮೊಕದ್ದಮೆ ದಾಖಲಿಸುತ್ತೇವೆ- ವಿಪಕ್ಷ ನಾಯಕ ಸಿದ್ದರಾಮಯ್ಯ