ಮನೆ ರಾಜಕೀಯ ಬಿಜೆಪಿ – ಜೆಡಿಎಸ್ ಮೈತ್ರಿ ಬೆನ್ನಲ್ಲೇ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ನಿಖಿಲ್...

ಬಿಜೆಪಿ – ಜೆಡಿಎಸ್ ಮೈತ್ರಿ ಬೆನ್ನಲ್ಲೇ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ನಿಖಿಲ್ ಕುಮಾರಸ್ವಾಮಿ

0

ಬೆಂಗಳೂರು ಬಿಜೆಪಿ – ಜೆಡಿಎಸ್ ಮೈತ್ರಿ ಘೋಷಿಸಿದ ಬೆನ್ನೆಲೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಇಂದು ಬೆಂಗಳೂರಿನಲ್ಲಿ ಭೇಟಿ ಮಾಡಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಯಡಿಯೂರಪ್ಪನವರ ಆಶೀರ್ವಾದ ಪಡೆಯಲು ಬಂದಿರುವುದಾಗಿ ತಿಳಿಸಿದ್ದಾರೆ.

ನಮಗೆಲ್ಲ ತಿಳಿದಿರುವ ಹಾಗೆ ಜೆಡಿಎಸ್ ಮತ್ತು ಬಿಜೆಪಿ ಈಗ ಎನ್.ಡಿ.ಎ ಮೈತ್ರಿಕೂಟದ ಭಾಗವಾಗಿದೆ. ಯಡಿಯೂರಪ್ಪ ರಾಜ್ಯದ ಹಿರಿಯ ನಾಯಕರಾಗಿದ್ದು ಅವರ ಆಶೀರ್ವಾದ ಪಡೆಯಲು ನಾನು ಇಲ್ಲಿಗೆ ಬಂದಿದ್ದೇನೆ ಅವರು ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ ಎಂದಿದ್ದಾರೆ.

ಈ ವೇಳೆ ಯಡಿಯೂರಪ್ಪನವರಿಗೆ ಶಾಲುವೋದಿಸಿ ಸನ್ಮಾನ ಮಾಡಿದ ನಿಖಿಲ್ ಕುಮಾರಸ್ವಾಮಿ ಕೃಷ್ಣನ ಮೂರ್ತಿಯನ್ನು ಹುಡುಗರೆಯಾಗಿ ನೀಡಿದ್ದಾರೆ.

ಶುಕ್ರವಾರ ಜೆಡಿಎಸ್ ಪಕ್ಷ ಎನ್.ಡಿ.ಎ ಒಕ್ಕೂಟವನ್ನು ಸೇರಿತ್ತು. ಆ ಮೂಲಕ ಮುಂದಿನ ಲೋಕಸಭಾ ಚುನಾವಣೆಗೆ ಬಿಜೆಪಿಯ ಜೊತೆ ಸ್ಪರ್ಧಿಸಲು ಅಣಿಯಾಗಿವೆ.

ಹಿಂದಿನ ಲೇಖನಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ: 9ನೇ ತರಗತಿ, ಪ್ರಥಮ ಪಿಯು ಗೆ ಬೋರ್ಡ್ ಪರೀಕ್ಷೆ
ಮುಂದಿನ ಲೇಖನಸೆ. 25 ರಿಂದ 28 ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ 5ನೇ ವಿಶ್ವ ಕಾಫಿ ಸಮ್ಮೇಳನ