ರಾಜ್ಯದ ಜನತೆಗೆ ಕರ್ನಾಟಕ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದೆ.
ಇನ್ಮುಂದೆ ಜನನ, ಮರಣ ನೋಂದಣಿಗೆ ನ್ಯಾಯಾಲಯಕ್ಕೆ ಅಲೆಯಬೇಕಾಗಿಲ್ಲ. ಜನನ-ಮರಣ ನೋಂದಣಿ ತಿದ್ದುಪಡಿ ಅಧಿಕಾರವನ್ನು ತಾಲೂಕು ಮಟ್ಟದ ಉಪ ವಿಭಾಗಧಿಕಾರಿಗಳಿಗೆ ನೀಡಲು ನಿರ್ಧರಿಸಲಾಗಿದೆ. ಜನನ-ಮರಣ ನೋಂದಣಿಯಲ್ಲಿ ವಿಳಂಬ ನೋಂದಣಿ ಹಾಗೂ ತಿದ್ದುಪಡಿ ಅಧಿಕಾರವನ್ನು ಉಪ ವಿಭಾಗಧಿಕಾರಿಗೆ ನೀಡಲಾಗಿದೆ.
ಜನನ, ಮರಣ ನೋಂದಣಿ ನಿಯಮಗಳು- 1999 ರ ನಿಯಮಗಳ ಪ್ರಕಾರ ವಿಳಂಬ ನೋಂದಣಿಗೆ ಸಾರ್ವಜನಿಕರು ಹಾಲಿ ಪಾವತಿಸುತ್ತಿರುವ ಶುಲ್ಕವನ್ನು ಪರಿಷ್ಕರಿಸಲಾಗಿದೆ. ಜನನ, ಮರಣ ಘಟಿಸಿದ 21 ದಿನಗಳ ನಂತರ ಹಾಗೂ 30 ದಿನಗಳ ಒಳಗಾಗಿ ನೋಂದಾಯಿಸುವ ವಿಳಂಬ ನೋಂದಣಿಗೆ ಹಾಲಿ ಇರುವ ವಿಳಂಬ ಶುಲ್ಕವನ್ನು 2 ರೂಪಾಯಿ ಬದಲು 1000 ರೂಪಾಯಿಗೆ, 30 ದಿನಗಳ ನಂತರ ರೂಪಾಯಿ 5ರ ಬದಲು 200 ರೂಪಾಯಿಗೆ, 1 ವರ್ಷ ಬಳಿಕ ನೋಂದಣಿಗೆ 10 ರೂಪಾಯಿ ಬದಲು ಬದಲು 500 ರೂಪಾಯಿಗೆ ಶುಲ್ಕವನ್ನು ಪರಿಷ್ಕರಿಸಲಾಗಿದೆ.
ಈವರೆಗೆ ಜನನ, ಮರಣ ನೋಂದಣಿ ಕಾಯಿದೆ ಸೆಕ್ಷನ್ 12(3) ಅಡಿ ವಿಳಂಬ ತಿದ್ದುಪಡಿ ಸೇರಿದಂತೆ ಯಾವುದೇ ತಕರಾರುಗಳಿದ್ದರೂ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ಅಥವಾ ಪ್ರೆಸಿಡೆನ್ಸ್ ಮ್ಯಾಜಿಸ್ಟ್ರೇಟ್ ಮಾತ್ರ ಆದೇಶ ಹೊರಡಿಸಬಹುದಾಗಿದ್ದು, ಬೇರೆ ಯಾರಿಗೂ ಅಧಿಕಾರ ಇರಲಿಲ್ಲ. ಆದರೆ ಮುಂದಕ್ಕೆ ಜನನ, ಮರಣನೋಂದಣಿಗೆ ನ್ಯಾಯಾಲಯಕ್ಕೆ ಅಲೆಯಬೇಕಾಗಿಲ್ಲ. ಜನನ-ಮರಣ ನೋಂದಣಿ ತಿದ್ದುಪಡಿ ಅಧಿಕಾರವನ್ನು ತಾಲೂಕು ಮಟ್ಟದ ಉಪ ವಿಭಾಗಧಿಕಾರಿಗಳಿಗೆ ನೀಡಲು ನಿರ್ಧರಿಸಲಾಗಿದೆ.
ವಿಜಯನಗರ ವಾರ್ಡ್ ನಂಬರ್ 20ರಲ್ಲಿ ನಗರ ಪಾಲಿಕೆ ವತಿಯಿಂದ ಸವಾಲ್ ಟಿವಿ ಸಹಯೋಗದೊಂದಿಗೆ "ಸ್ವಚ್ಛತಾ ಶ್ರಮದಾನ"
ನಗರ ಪಾಲಿಕೆ ವತಿಯಿಂದ ಸವಾಲ್ ಟಿವಿ ಸಹಯೋಗದೊಂದಿಗೆ "ಸ್ವಚ್ಛತಾ ಶ್ರಮದಾನ"
ಮಾನ್ಯ ಶ್ರೀ ಪ್ರದೀಪ್ ಕುಮಾರ್ ರವರ ಹುಟ್ಟು ಹಬ್ಬದ ಆಚರಣೆ
ಊರು ಬಿಟ್ಟು ದೂರದ ಊರಿಗೆ ಹೋಗಿರುವ ಮಕ್ಕಳು ತಂದೆ- ತಾಯಿಯ ನೋವನ್ನ ಅರ್ಥ ಮಾಡಿಕೊಳ್ಳಬೇಕು
ಸವಾಲ್ ಪತ್ರಿಕೆಯ ಸಂಪಾದಕರು HRAC ಸ್ಥಾಪಕರು ಆದ ಪ್ರದೀಪ್ ಕುಮಾರ್ ರವರಿಗೆ ಹುಟ್ಟು ಹಬ್ಬದ ಶುಭಾಶಯಗಳು 16-06-2023
ಅದ್ಬುತ ಮಾತುಗಳು ದಯವಿಟ್ಟು ಎಲ್ಲ ತಂದೆ ತಾಯಿ ಮಕ್ಕಳು ಇದನ್ನ ನೋಡಲೇ ಬೇಕು ..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.