ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಸಾಂವಿಧಾನಿಕ ಪ್ರಜಾಪ್ರಭುತ್ವದಲ್ಲಿ ಯಾವುದೇ ಸಂಸ್ಥೆ ನೂರಕ್ಕೆ ನೂರರಷ್ಟು ಪರಿಪೂರ್ಣವಲ್ಲ ಮತ್ತು ನ್ಯಾಯಮೂರ್ತಿಗಳ ನೇಮಕ ಮಾಡುವ ಕೊಲಿಜಿಯಂ ವ್ಯವಸ್ಥೆಯನ್ನು ಪ್ರತ್ಯೇಕಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ ವೈ ಚಂದ್ರಚೂಡ್ ಶುಕ್ರವಾರ ಹೇಳಿದರು.
ಸಂವಿಧಾನ ದಿನದ ಅಂಗವಾಗಿ ದಿನಾಚರಣೆಯ ಮುನ್ನಾದಿನವಾದ ಶುಕ್ರವಾರ ಸುಪ್ರೀಂ ಕೋರ್ಟ್ ವಕೀಲರ ಸಂಘ ನವದೆಹಲಿಯಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು.
ನ್ಯಾಯಮೂರ್ತಿಗಳು ಸಂವಿಧಾನವನ್ನು ಜಾರಿಗೆ ತರುವ ನಿಷ್ಠಾವಂತ ಸಿಪಾಯಿಗಳು ಎಂದು ಅವರು ಹೇಳಿದರು. ಇತ್ತೀಚೆಗೆ ಕೊಲಿಜಿಯಂ ವಿರುದ್ಧ ವಿವಿಧ ವಲಯಗಳಿಂದ ಬಂದ ಟೀಕೆಗಳ ಹಿನ್ನೆಲೆಯಲ್ಲಿ ಅವರ ಮಾತು ಮಹತ್ವ ಪಡೆದುಕೊಂಡಿದೆ.
“…ಸಾಂವಿಧಾನಿಕ ಪ್ರಜಾಪ್ರಭುತ್ವದಲ್ಲಿ ಯಾವುದೇ ಸಂಸ್ಥೆ ಪರಿಪೂರ್ಣವಲ್ಲ. ನಾವು ಸಂವಿಧಾನದ ಚೌಕಟ್ಟಿನೊಳಗೆ ಕೆಲಸ ಮಾಡುತ್ತೇವೆ. ನಾವು ಸಂವಿಧಾನವನ್ನು ಅನುಷ್ಠಾನಗೊಳಿಸುವ ನಿಷ್ಠಾವಂತ ಸೈನಿಕರು” ಎಂದು ಅವರು ಹೇಳಿದರು. ನಾವು ಅಪೂರ್ಣತೆಗಳ ಬಗ್ಗೆ ಮಾತನಾಡುವಾಗ ಅಸ್ತಿತ್ವದಲ್ಲಿರುವ ವ್ಯವಸ್ಥೆಯಲ್ಲಿ ನಮ್ಮದೇ ಆದ ರೀತಿಯಲ್ಲಿ ಕೆಲಸ ಮಾಡುವುದೇ ಪರಿಹಾರವಾಗಿದೆ” ಎಂದು ಕೂಡ ಅವರು ತಿಳಿಸಿದರು.
ಕೇವಲ ಕೊಲಿಜಿಯಂ ವ್ಯವಸ್ಥೆಯನ್ನು ಸುಧಾರಿಸುವುದರಿಂದ ಅಥವಾ ನ್ಯಾಯಮೂರ್ತಿಗಳ ವೇತನ ಹೆಚ್ಚಳ ಮಾಡುವುದರಿಂದ ಉತ್ತಮ ಮತ್ತು ಅರ್ಹರು ನ್ಯಾಯಪೀಠಕ್ಕೆ ಸೇರಿದಂತಾಗುವುದಿಲ್ಲ ಎಂದ ಅವರು ಆತ್ಮಸಾಕ್ಷಿಯಂತೆ ನಡೆದುಕೊಳ್ಳುವ ಸಾರ್ವಜನಿಕ ಸೇವೆಗೆ ಬದ್ಧರಾಗಿರುವ ವಕೀಲರು ನ್ಯಾಯಾಧೀಶರಾಗಿ ಪೀಠದ ಭಾಗವಾಗಬೇಕಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕೇಂದ್ರ ಕಾನೂನು ಸಚಿವ ಕಿರೆನ್ ರಿಜಿಜು ಕಾರ್ಯಾಂಗ ಮತ್ತು ನ್ಯಾಯಾಂಗದ ನಡುವಿನ ಜಗಳ ಅರ್ಥಹೀನವಾದುದು, ಏಕೆಂದರೆ ಅವು ಒಂದೇ ಸಂವಿಧಾನದ ಸೃಷ್ಟಿಯಾಗಿವೆ. ಹಾಗಾಗಿ ನ್ಯಾಯಾಂಗದ ಸ್ವಾತಂತ್ರ್ಯವನ್ನು ಕೇಂದ್ರ ಸರ್ಕಾರ ರಕ್ಷಿಸುತ್ತದೆ ಎಂದು ಅವರು ಭರವಸೆ ನೀಡಿದರು.
“ಭಾರತೀಯ ನ್ಯಾಯಾಂಗದ ಸ್ವಾತಂತ್ರ್ಯ ಅಖಂಡವಾಗಿ ಮತ್ತು ಅಬಾಧಿತವಾಗಿರುವಂತೆ ನಾವು ನೋಡಿಕೊಳ್ಳುತ್ತೇವೆ. ನಾವು (ಕಾರ್ಯಾಂಗ ಮತ್ತು ನ್ಯಾಯಾಂಗ) ಒಂದೇ ತಂದೆತಾಯಿಯ ಮಕ್ಕಳು. ನಾವು ಒಂದೇ ಸ್ವರೂಪದವರಾಗಿದ್ದು ನಮ್ಮ ನಡುವೆ ಜಗಳವಾಡುವುದರಿಂದ ಯಾವುದೇ ಪ್ರಯೋಜನವಿಲ್ಲ” ಅವರು ಹೇಳಿದರು.
“ಕಳೆದ 8.5 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಾವು ಸಂವಿಧಾನದ ಪಾವಿತ್ರ್ಯತೆಗೆ ಧಕ್ಕೆ ತರುವ ಯಾವುದೇ ಕೆಲಸ ಮಾಡಿಲ್ಲ, ಸಂವಿಧಾನವನ್ನು ತಿದ್ದುಪಡಿ ಮಾಡಬಹುದು ಆದರೆ ಸಂವಿಧಾನದ ಆಶಯವನ್ನು ಬದಲಾಯಿಸಲು ಸಾಧ್ಯವಿಲ್ಲ” ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಎಸ್ಸಿಬಿಎ ಅಧ್ಯಕ್ಷ ವಿಕಾಸ್ ಸಿಂಗ್ ಮತ್ತಿತರರು ಪಾಲ್ಗೊಂಡಿದ್ದರು.