ಮನೆ ಕಾನೂನು ಕೋರ್ಟ್ ಆದೇಶ ಪಾಲಿಸದ 41 ಇಲಾಖೆಗಳಿಗೆ ನೋಟಿಸ್‌

ಕೋರ್ಟ್ ಆದೇಶ ಪಾಲಿಸದ 41 ಇಲಾಖೆಗಳಿಗೆ ನೋಟಿಸ್‌

0

ಬೆಂಗಳೂರು: ನ್ಯಾಯಾಲಯದ ಆದೇಶ ಹಾಗೂ ನಿರ್ದೇಶನಗಳನ್ನು ಪಾಲಿಸಲು ಸರಕಾರದ ಎಲ್ಲಾ ಇಲಾಖೆಗಳು ಮತ್ತು – ಅದರ ಪ್ರಾಧಿಕಾರಗಳಲ್ಲಿ ಅಂತರಿಕ ಮೇಲ್ವಿಚಾರಣಾ ವ್ಯವಸ್ಥೆ ಆರಂಭಿಸುವ ವಿಚಾರ ಸಂಬಂಧ ಹೈಕೋರ್ಟ್, ರಾಜ್ಯ ಸರಕಾರದ ಮುಖ್ಯ ಕಾಯದರ್ಶಿ ಮತ್ತು ಸರಕಾರದ 41 ಇಲಾಖೆಗಳಿಗೆ ನೋಟಿಸ್‌ ಜಾರಿಗೊಳಿಸಿದೆ.

Join Our Whatsapp Group

ನ್ಯಾಯಾಲಯಗಳ ಆದೇಶ ಪಾಲಿಸಲು ಸರಕಾರ ಮತ್ತದರ ಪ್ರಾಧಿಕಾರಗಳ ನಿರ್ಲಕ್ಷ್ಯ ಹಾಗೂ ವಿಳಂಬ ಧೋರಣೆ ಹಿನ್ನೆಲೆಯಲ್ಲಿ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಮಂಗಳವಾರ ಈ ಆದೇಶ ಮಾಡಿದೆ.

ಅರ್ಜಿಯಲ್ಲಿ ಕೃಷಿ, ಕಂದಾಯ, ಆರೋಗ್ಯ ಹಾಗೂ ಗೃಹ ಇಲಾಖೆ ಸೇರಿದಂತೆ 41 ಇಲಾಖೆಗಳನ್ನು, ಬಿಡಿಎ, ಬಿಬಿಎಂಪಿ ಆಯುಕ್ತರು ಮತ್ತು ಕೆಐಎಡಿಬಿ ಕಾರ್ಯಕಾರಿ ನಿರ್ದೇಶಕರನ್ನು ಅನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಅರ್ಜಿದಾರರ ಪರ ವಕೀಲ ಮಧುಕರ್ ಎಂ. ದೇಶಪಾಂಡೆ ಅವರ ವಾದ, ಆಲಿಸಿದ ವಿಭಾಗೀಯ ಪೀತೆ, ಎಲ್ಲಾ ಪ್ರತಿವಾದಿಗಳಿಗೆ ನೋಟಿಸ್ ನೀಡಿ ವಿಚಾರಣೆ ಮುಂದೂಡಿತು.

ಮೂಲ ಹಕ್ಕಿನ ಉಲ್ಲಂಘನೆ:

ನ್ಯಾಯಾಲಯ ಆದೇಶ ಪಾಲಿಸಲು ಸರಕಾರ ಮತ್ತು ಅದರ ಪ್ರಾಧಿಕಾರ ಗಳು ನಿರ್ಲಕ್ಷ್ಯ ಹಾಗೂ ವಿಳಂಬ ನೀತಿ ಅನುಸರಿಸುತ್ತಿವೆ. ನ್ಯಾಯಾಲಯಗಳ ಮೊರೆ ಹೋಗುವುದು ಸಾರ್ವಜನಿಕರ ಮೂಲ ಹಕ್ಕು. ಹಾಗಾಗಿ ಅದೇಶ ಪಾಲಿಸದಿರುವುದು ಜನರ ಮೂಲ ಹಕ್ಕಿನ ಉಲ್ಲಂಘನೆಯಾಗಿದೆ. ನ್ಯಾಯಾಲಯಗಳ ಆದೇಶ ಪಾಲಿಸಲು ಅಧಿಕಾರಿಗಳು ತೋರುತ್ತಿರುವ ನಿರ್ಲಕ್ಷ್ಯವನ್ನು ಒಪ್ಪುವಂತಹದ್ದಲ್ಲ. ಆದ್ದರಿಂದ ನ್ಯಾಯಾಲಯಗಳ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಿದೆ. ಅದಕ್ಕಾಗಿ ಎಲ್ಲಾ ಇಲಾಖೆಗಳಲ್ಲಿ ಆಂತರಿಕ ಮೇಲ್ವಿಚಾರಣಾ ಸಮಿತಿ ಆರಂಭಿಸಬೇಕಿದೆ. ಈ ಕುರಿತು ಅಗತ್ಯ ನಿರ್ದೇಶನ ನೀಡಬೇಕಿರುವ ಹಿನ್ನೆಲೆಯಲ್ಲಿ ಸರಕಾರ ಮತ್ತು ಅದರ ಎಲ್ಲಾ ಇಲಾಖೆಗಳನ್ನು ಪ್ರತಿವಾದಿ ಮಾಡಿ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸುವಂತೆ ಹೈಕೋರ್ಟ್ ವಿಭಾಗೀಯ ಪೀಠವು 2024ರ ಎ.8ರಂದು ರಿಜಿಸ್ಟ್ರಾರ್ ಜನರಲ್‌ಗೆ ನಿರ್ದೇಶಿಸಿತ್ತು. ಅದರಂತೆ ರಿಜಿಸ್ಟ್ರಾ‌ರ್ ಜನರಲ್ ಈ ಅರ್ಜಿ ದಾಖಲಿಸಿದ್ದಾರೆ.

ಹಿಂದಿನ ಲೇಖನಚಾಮುಂಡಿಬೆಟ್ಟದಲ್ಲಿ ಸೆಕ್ಯೂರಿಟಿ ಸಿಬ್ಬಂದಿಗಳ ನೇಮಕಾತಿಯಲ್ಲಿ ಭಾರಿ ಭ್ರಷ್ಟಾಚಾರ: ಹಣ ನೀಡಿದರೆ ಮಾತ್ರ ವಿಐಪಿ ದರ್ಶನ
ಮುಂದಿನ ಲೇಖನಜಿಬೂಟಿಯಲ್ಲಿ ದೋಣಿ ಪಲ್ಟಿಯಾಗಿ 21 ಮಂದಿ ಸಾವು: 23 ಜನರು ನಾಪತ್ತೆ