ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ವಲಯವಾರು ಪಬ್, ಬಾರ್ ಮತ್ತು ರೆಸ್ಟೋರೆಂಟ್ ಗಳ ಮೇಲೆ ಬಿಬಿಎಂಪಿ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದು, 12 ಪಬ್, ಬಾರ್ ಗಳಿಗೆ ಬೀಗ ಜಡಿದಿದ್ದಾರೆ.
ರಾಜ್ಯ ರಾಜಧಾನಿಯಲ್ಲಿ ಅಗ್ನಿ ದುರಂತ ಪ್ರಕರಣಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಅಲರ್ಟ್ ಆಗಿದ್ದು, ನಗರದಲ್ಲಿರುವ ಪಬ್, ಬಾರ್ ಮತ್ತು ರೆಸ್ಟೋರೆಂಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಪಾಲಿಕೆಯ 8 ವಲಯಗಳಲ್ಲಿ ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ಇಂದು ತಪಾಸಣೆ ನಡೆಸಲಾಯಿತು. ನ್ಯೂನತೆಗಳು ಕಂಡುಬಂದಿರುವ ಉದ್ದಿಮೆಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಜತೆಗೆ ಪರವಾನಿಗೆ ನಿಯಮಾವಳಿ ಪಾಲಿಸದ ಉದ್ದಿಮೆಗಳನ್ನು ಸ್ಥಳದಲ್ಲೇ ಮುಚ್ಚಿಸಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 1,118 ಉದ್ದಿಮೆಗಳಿಗೆ ಪರವಾನಿಗೆ ನೀಡಲಾಗಿದ್ದು, ಈ ಪೈಕಿ ಇಂದು 232 ಉದ್ದಿಮೆಗಳನ್ನು ಪರಿಶೀಲಿಸಲಾಗಿದೆ. ಅದರಲ್ಲಿ 86 ಉದ್ದಿಮೆಗಳಿಗೆ ನೋಟಿಸ್ ಜಾರಿಗೊಳಿಸಿ, 12 ಉದ್ದಿಮೆಗಳನ್ನು ಮುಚ್ಚಲಾಗಿದೆ.
ನಿರ್ಲಕ್ಷ್ಯ ವಹಿಸಿರುವ ಪಬ್, ಬಾರ್ ಮತ್ತು ರೆಸ್ಟೋರೆಂಟ್ಗಳ ವಿರುದ್ಧ ಕೈಗೊಂಡ ಕ್ರಮಗಳು ಏನು ಎಂಬುದರ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಸೂಚನೆ ನೀಡಲಾಗಿದೆ. ಹೀಗಾಗಿ, ಸಮರೋಪಾದಿಯಲ್ಲಿ ನಗರದಲ್ಲಿ ತಪಾಸಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಲಯ ಆರೋಗ್ಯಾಧಿ ಕಾರಿಗಳಿಗೆ ಏಳು ದಿನ ಸಮಯ ನೀಡಲಾಗಿದೆ, ಈ ಏಳು ದಿನದಲ್ಲಿ ತಮ್ಮ ವಲಯ ವ್ಯಾಪ್ತಿಯಲ್ಲಿ ಎಷ್ಟು ಪಬ್, ಬಾರ್ ಮತ್ತು ಸ್ಟೋರೆಂಟ್ ಗಳಿವೆ, ಎಷ್ಟು ಪಬ್, ಬಾರ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಅಗ್ನಿ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆ. ಎಲ್ಲಿ ನ್ಯೂನ್ಯತೆಗಳಿವೆ. ಪಬ್, ಬಾರ್ ಮತ್ತು ರೆಸ್ಟೋರೆಂಟ್ ನಡೆಸುವುದಕ್ಕೆ ಬಿಬಿಎಂಪಿ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳಿಂದ ಪರವಾನಗಿ ಪಡೆಯಲಾಗಿದೆಯೇ? ಎಷ್ಟು ಕಡೆ ಅನಧಿಕೃತವಾಗಿ ಮತ್ತು ಕಾನೂನು ಉಲ್ಲಂಘಿಸಿ ನಡೆಸಲಾಗುತ್ತಿದೆ ಎಂದು ಪರಿಶೀಲಿಸಲು ಸೂಚಿಸಲಾಗಿದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.