ಬಿಬಿಎಂಪಿ ಮಾಲೀಕತ್ವದ ಕಟ್ಟಡಗಳಲ್ಲಿ ಚುನಾಯಿತ ಪ್ರತಿನಿಧಿಗಳ ಚಿತ್ರ ಪ್ರದರ್ಶಿಸುವುದಕ್ಕೆ ಆಕ್ಷೇಪಿಸಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಕರ್ನಾಟಕ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ.
ಬೆಂಗಳೂರಿನ ಗೋವಿಂದರಾಜ ನಗರ ಮತ್ತು ವಿಜಯನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಬಿಎಂಪಿ ಅನುದಾನದಲ್ಲಿ ಬಿಬಿಎಂಪಿ ಮಾಲೀಕತ್ವದ ಆಡಳಿತಾತ್ಮಕ ಕಟ್ಟಡ, ಉದ್ಯಾನ, ಧ್ಯಾನ ಮಂದಿರ, ಕ್ರೀಡಾಂಗಣದಲ್ಲಿ ಹಾಲಿ ಶಾಸಕರಾದ ಪ್ರಿಯಕೃಷ್ಣ ಮತ್ತು ಎಂ ಕೃಷ್ಣಪ್ಪ ಅವರ ಚಿತ್ರ ತೆರವು ಮಾಡಲು ಅಧಿಕಾರಿಗಳಿಗೆ ನಿರ್ದೇಶಿಸುವಂತೆ ಕೋರಿ ಮೂಡಲಪಾಳ್ಯದ ಶಿವಾನಂದ ನಗರದ ನಿವಾಸಿ ಎಚ್ ಎಂ ಆರ್ತೀಸ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ರಾಜ್ಯ ಸರ್ಕಾರದ ನಗರಾಭಿವೃದ್ಧಿ ಇಲಾಖೆ ಮತ್ತು ಬಿಬಿಎಂಪಿಗೆ ನೋಟಿಸ್ ಜಾರಿಗೊಳಿಸಿ, ಆಕ್ಷೇಪಣೆ ಸಲ್ಲಿಸಲು ಆದೇಶಿಸಿ ಪೀಠವು ವಿಚಾರಣೆ ಮುಂದೂಡಿತು.
ರಾಷ್ಟ್ರಪತಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ, ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಮತ್ತು ಇಲಾಖಾ ಸಚಿವರು ಚಿತ್ರಗಳನ್ನು ಹೊರತುಪಡಿಸಿ, ಸಂಸದರು, ಶಾಸಕರು ಸೇರಿದಂತೆ ಬೇರೆ ಯಾರದೂ ಚಿತ್ರಗಳನ್ನು ಸರ್ಕಾರದ ಕಟ್ಟಡಗಳಲ್ಲಿ ಪ್ರಕಟಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ಅದಾಗ್ಯೂ, ಪ್ರಿಯಕೃಷ್ಣ ಮತ್ತು ಕೃಷ್ಣಪ್ಪ ಅವರ ಚಿತ್ರಗಳನ್ನು ಬಿಬಿಎಂಪಿ ವ್ಯಾಪ್ತಿಯ ಕಟ್ಟಡಗಳಲ್ಲಿ ಬಳಕೆ ಮಾಡಿರುವ ವಿಚಾರವನ್ನು ಅಧಿಕಾರಿಗಳಿಗೆ ಗಮನಕ್ಕೆ ತರಲಾಗಿದೆ. ಅವರಾರೂ ಕ್ರಮಕೈಗೊಂಡಿಲ್ಲ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.
ವಿಚಾರವನ್ನು ಗಮನಕ್ಕೆ ತಂದರೂ ಕ್ರಮಕೈಗೊಳ್ಳದ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.