ಮನೆ ಉದ್ಯೋಗ ನ. 19ರಂದು ಅನ್ನದಾತರ ಮಕ್ಕಳಿಗಾಗಿ ಉದ್ಯೋಗ ಮೇಳ

ನ. 19ರಂದು ಅನ್ನದಾತರ ಮಕ್ಕಳಿಗಾಗಿ ಉದ್ಯೋಗ ಮೇಳ

0

ಮೈಸೂರು: ಒಕ್ಕಲಿಗ ಯುವ ಬ್ರಿಗೇಡ್ ಹಾಗೂ ಎನ್.ಆರ್ ಒಕ್ಕಲಿಗ ಬ್ರಿಗೇಡ್ ಸಹಯೋಗದಿಂದ ನ. 19 ರಂದು ಬೆಳೆಗೆ 10 ರಿಂದ ಸಂಜೆ 5 ರವರೆಗೆ ಮೈಸೂರು ಹೆಬ್ಬಾಳ ಕೈಗಾರಿಕಾ ಪ್ರದೇಶದ ಶ್ರೀ ಲಕ್ಷ್ಮಿಕಾಂತ ದೇವಸ್ಥಾನ ಆವರಣದ ಬಿಜಿಎಸ್ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಸಭಾಭವನದಲ್ಲಿ ಅನ್ನದಾತರ ಮಕ್ಕಳಿಗಾಗಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸಮ್ಮುಖದಲ್ಲಿ ಬೆಂಗಳೂರಿನ ಕಿದ್ವಾಯಿ ಮೆಮೋರಿಯಲ್ ಇನ್ಸ್ಟಿಟ್ಯೂಟ್ ಆಫ್ ಅಂಕೋಲಜಿ ವಿಭಾಗದ ಮಾಜಿ ನಿರ್ದೇಶಕ ಡಾ.ಸಿ ರಾಮಚಂದ್ರ ಉದ್ಘಾಟಿಸಲಿದ್ದಾರೆ.

ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಶ್ರೀ ಸೋಮೇಶ್ವರನಾಥ ಸ್ವಾಮೀಜಿ, ರೇರಾ ಅಧ್ಯಕ್ಷ ಎಸ್.ಸಿ. ಕಿಶೋರ್ ಚಂದ್ರ, ಶ್ರೀ ರಾಮಕೃಷ್ಣ ಆಶ್ರಮದ ಸ್ವಾಮಿ ಮುಕ್ತಿದಾನಂದಜೀ ಮಹಾರಾಜ್, ಹಿರಿಯ ಪತ್ರಕರ್ತ ಚೆನ್ನೇಗೌಡ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಮುಖ್ಯ ಸಲಹೆಗಾರ ಅಭಿಜಿತ್, ಐಎಎಸ್ ಅಧಿಕಾರಿಗಳಾದ ಪ್ರದೀಪ್ ಪ್ರಭಾಕರ್, ಎನ್. ಮಂಜುಶ್ರೀ, ಎಸ್.ಎನ್ ಬಾಲಚಂದ್ರ, ಐಪಿಎಸ್ ಅಧಿಕಾರಿಗಳಾದ ಯತೀಶ್, ಎಂ.ಮುತ್ತುರಾಜ್, ಪೃಥ್ವಿಕ್ ಶಂಕರ್ ಉಪಸ್ಥಿತರಿರುವರು ಎಂದು ಕಾರ್ಯಕಾರಿ ಸಮಿತಿ ಸದಸ್ಯ ನಂಜೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ 9686564192 ಸಂಪರ್ಕಿಸಬಹುದು.

ಹಿಂದಿನ ಲೇಖನಸರಗೂರು: ಹುಲಿ ದಾಳಿಗೆ ರೈತ ಬಲಿ
ಮುಂದಿನ ಲೇಖನಹಿರಿಯ ರಾಜಕಾರಣಿ ಡಿ.ಬಿ.ಚಂದ್ರೇಗೌಡ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ