ಮೈಸೂರು: ಸಹಾಯಕ ಕೃಷಿ ನಿರ್ದೇಶಕರು/ಕೃಷಿ ಅಧಿಕಾರಿ ಹಾಗೂ ರಸಗೊಬ್ಬರ, ಬಿತ್ತನೆ ಬೀಜ ಮತ್ತು ಪೀಡೆನಾಶಕ ಪರಿವೀಕ್ಷಕರು ಇಂದು ತಾಲ್ಲೂಕಿನಾದ್ಯಂತ ವಿವಿಧ ಪರಿಕರ ಮಾರಾಟಗಾರರ ಮಳಿಗೆಗಳಿಗೆ ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಿದರು.
ಇದೇ ಸಂದರ್ಭದಲ್ಲಿ ಆಯ್ದ ರಸಗೊಬ್ಬರ, ಪೀಡೆನಾಶಕ ಮತ್ತು ಬಿತ್ತನೆ ಬೀಜಗಳ ಮಾದರಿಗಳನ್ನು ತೆಗೆದು ಪ್ರಯೋಗಾಲಯಕ್ಕೆ ವಿಶ್ಲೇಷಣೆಗಾಗಿ ಕಳುಹಿಸಿದರು. ಪರಿಕರ ಮಾರಾಟಗಾರಿಗೆ ಈ ಸಂಬoಧ ಕ್ರಮಬದ್ಧವಾಗಿ ವ್ಯವಹರಿಸಲು ನಿರ್ದೇಶಿಸಿದ್ದು, ತಪ್ಪಿದ್ದಲ್ಲಿ ಸೂಕ್ತ ಕ್ರಮ ಜರುಗಿಸಲಾಗುವುದೆಂಬ ಎಚ್ಚರಿಕೆಯನ್ನು ನೀದಿದರು.
ರೈತರು ಯಾವುದೇ ಕೃಷಿ ಪರಿಕರಗಳನ್ನು ಖರೀದಿಸಿದಾಗ ರಶೀದಿಯನ್ನು ತಪ್ಪದೇ ಪಡೆಯಬೇಕೆಂದು ತಿಳಿಸಿದರು. ಹೆಚ್ಚಿನ ಮಾಹಿತಿಗೆ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಅಥವಾ ಹೋಬಳಿಯ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಬಹುದು ಎಂದು ಸಹಾಯಕ ಕೃಷಿ ನಿರ್ದೇಶಕರಾದ ಜಯರಾಮ.ಬಿ.ಡಿ ಅವರು ತಿಳಿಸಿದರು.
ಹಾಲ್ನೊರೆಯಂತೆ ಉಕ್ಕುತ್ತಿರುವ ದೂಧ್ ಸಾಗರ ಜಲಪಾತ
ಪುಣೆಯಲ್ಲಿ ಭಾರೀ ಮಳೆ , ಉಕ್ಕಿಹರಿಯುತ್ತಿರುವ
ಗ್ರಾಮಕ್ಕೆ ಕರೆಂಟ್ ಕೊಡಲು ಲೈನ್ ಮ್ಯಾನ್ ಹೋರಾಟ
ಸವಾಲ್ ನ್ಯೂಸ್ ಪ್ರಚಲಿತ ಸುದ್ದಿಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.