ಮನೆ ಅಪರಾಧ ಬುದ್ದಿ ಮಾತು ಹೇಳಿದ್ದಕ್ಕೆ ಅಣ್ಣನನ್ನೇ ಕೊಂದ ತಮ್ಮ

ಬುದ್ದಿ ಮಾತು ಹೇಳಿದ್ದಕ್ಕೆ ಅಣ್ಣನನ್ನೇ ಕೊಂದ ತಮ್ಮ

0

ಯಾದಗಿರಿ (Yadagiri) : ಬುದ್ದಿ ಹೇಳಿದ ಕಾರಣಕ್ಕಾಗಿ ಸ್ವಂತ ತಮನನ್ನೇ ಅಣ್ಣ ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಎಂಪಾಡ ಗ್ರಾಮದಲ್ಲಿ ನಡೆದಿದೆ.

ದೇವಿಂದ್ರ (28) ಎಂಬಾತ ಕೊಲೆಯಾದ ತಮ್ಮ. ಜಯರಾಮ ಎಂಬಾತ ಕೊಲೆ (murder) ಮಾಡಿದ ಆರೋಪಿ ಅಣ್ಣ. ಜಯರಾಮ್ ಹಾಗೂ ದೇವಿಂದ್ರ ಸಹೋದರರು ಯುಗಾದಿ ಹಬ್ಬದ ಹಿನ್ನೆಲೆ ಊರಿಗೆ ಬಂದಿದ್ದರು. ಭಾನುವಾರ ರಾತ್ರಿ ಇಬ್ಬರು ಸಹೋದರರ ನಡುವೆ ಜಗಳ ಪ್ರಾರಂಭವಾಗಿದೆ. ಈ ವೇಳೆ ದೇವಿಂದ್ರ, ನೀನು ಜಮ್ಲಾನಾಯಕ ಮಕ್ಕಳ ಸಹವಾಸ ಮಾಡಬೇಡ ಎಂದು ಬುದ್ಧಿ ಹೇಳಿದ್ದಾನೆ.

ಬುದ್ಧಿ ಹೇಳಿದ್ದಕ್ಕೆ ಕೋಪಗೊಂಡ ಜಯರಾಮ್, ಕುಟುಂಬಸ್ಥರ ಮುಂದೆಯೇ ತಮ್ಮನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಈ ಸಂಬಂಧ ಘಟನಾ ಸ್ಥಳಕ್ಕೆ ಗುರುಮಠಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಹಿಂದಿನ ಲೇಖನತಂದೆ ಸಾವಿನ ನೋವಿನಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿನಿ
ಮುಂದಿನ ಲೇಖನಒಂದೇ ದಿನದಲ್ಲಿ 33 ಮಿಲಿಯನ್ ವೀಕ್ಷಣೆ ಕಂಡ `ಬೀಸ್ಟ್’