ಮನೆ ಸುದ್ದಿ ಜಾಲ ಮಾ.೧೮ ರಂದು ಜಿಲ್ಲಾಧಿಕಾರಿಗಳ ನಡೆ ಗ್ರಾಮಗಳ ಕಡೆ ಕಾರ್ಯಕ್ರಮ

ಮಾ.೧೮ ರಂದು ಜಿಲ್ಲಾಧಿಕಾರಿಗಳ ನಡೆ ಗ್ರಾಮಗಳ ಕಡೆ ಕಾರ್ಯಕ್ರಮ

0

ಮೈಸೂರು: ಮೈಸೂರು ತಾಲೂಕಿನ ಇಲವಾಲ ಹೋಬಳಿಯ ಕಲ್ಲೂರು ನಾಗನಹಳ್ಳಿ ಗ್ರಾಮದಲ್ಲಿ ಮಾರ್ಚ್ 18 ರಂದು ಜಿಲ್ಲಾಧಿಕಾರಿಗಳ ನಡೆ ಗ್ರಾಮಗಳ ಕಡೆ ಗ್ರಾಮಭೇಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಗ್ರಾಮಸ್ಥರು ಗ್ರಾಮಕ್ಕೆ ಸಂಬoಧಿಸಿದoತೆ ಸಮಸ್ಯೆಗಳ ಬಗ್ಗೆ ಮುಂಚಿತವಾಗಿಯೇ ಸಂಬoಧಪಟ್ಟ ನಾಡಕಚೇರಿ/ಉಪತಹಸೀಲ್ದಾರ್, ರಾಜಶ್ವ ನಿರೀಕ್ಷಕರಿಗೆ ತಮ್ಮ ಮನವಿಗಳನ್ನು ಸಲ್ಲಿಸಿ, ಪರಿಹಾರ/ಸಮಸ್ಯೆ ಇತ್ಯರ್ಥಪಡಿಸಿಕೊಳ್ಳಲು ತಿಳಿಸಲಾಗಿದೆ.

ಜಿಲ್ಲಾಧಿಕಾರಿಗಳು ಭೇಟಿ ನೀಡಲಿರುವ ತಾಲೂಕನ್ನು ಹೊರತುಪಡಿಸಿ ಉಪವಿಭಾಗಾಧಿಕಾರಿಗಳು ಮತ್ತು ತಹಸೀಲ್ದಾರರು ಕೆ.ಆರ್ ನಗರ ತಾಲ್ಲೂಕು ಮತ್ತು ಸಾಲಿಗ್ರಾಮ ತಾಲೂಕಿನ ಸಾಲಿಗ್ರಾಮ ಹೋಬಳಿಯ ಅಂಕನಹಳ್ಳಿ ಗ್ರಾಮದಲ್ಲಿ, ಹೆಚ್ ಡಿ ಕೋಟೆ ತಾಲೂಕಿನ ಕಸಬಾ ಹೋಬಳಿಯ ಕಟ್ಟೆಮನುಗನ ಹಳ್ಳಿಯಲ್ಲಿ ಪಿರಿಯಾಪಟ್ಟಣ ತಾಲೂಕಿನ ಹಾರನಹಳ್ಳಿ ಹೋಬಳಿಯ ಬೈಲುಕುಪ್ಪೆ ಗ್ರಾಮದಲ್ಲಿ, ನಂಜನಗೂಡು ತಾಲೂಕಿನ ಚಿಕ್ಕಯ್ಯನ ಛತ್ರ ಹೋಬಳಿಯ ತುಂನೇರಳೆ ಗ್ರಾಮದಲ್ಲಿ, ಟಿ ನರಸೀಪುರ ತಾಲೂಕಿನ ಸೋಸಲಿ ಹೋಬಳಿಯ ಕೊಳತ್ತೂರು ಗ್ರಾಮದಲ್ಲಿ, ಸರಗೂರು ತಾಲೂಕಿನ ಸರಗೂರು ಹೋಬಳಿಯ ಚಂಗೌಡನಹಳ್ಳಿಯಲ್ಲಿ ಹಾಗೂ ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಚಲ್ಲಹಳ್ಳಿ ಗ್ರಾಮದಲ್ಲಿ ಕಾರ್ಯಕ್ರಮ ನಡೆಸಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದಿನ ಲೇಖನಮೇಕಿಂಗ್ ನಲ್ಲಿ ‘ಕಬ್ಜ’ ಕಿಂಗ್; ಆ್ಯಕ್ಷನ್ ಪ್ರಿಯರಿಗೆ ಎಂಟರ್ ಟೇನಿಂಗ್
ಮುಂದಿನ ಲೇಖನಆಸ್ಟ್ರೇಲಿಯಾ ಟೆಸ್ಟ್‌ ತಂಡದ ಮಾಜಿ ನಾಯಕ ಟಿಮ್ ಪೇನ್‌ ಎಲ್ಲಾ ಮಾದರಿ ಕ್ರಿಕೆಟ್ ಗೆ ನಿವೃತ್ತಿ