ಮನೆ ಅಪರಾಧ ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದವರ ಮೇಲೆ ಚೂರಿ ಇರಿತ: ಓರ್ವ ಸಾವು, ಇನ್ನಿಬ್ಬರಿಗೆ ಗಾಯ

ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದವರ ಮೇಲೆ ಚೂರಿ ಇರಿತ: ಓರ್ವ ಸಾವು, ಇನ್ನಿಬ್ಬರಿಗೆ ಗಾಯ

0

ಬೆಂಗಳೂರು: ಮೆಜೆಸ್ಟಿಕ್’ನಲ್ಲಿರುವ ಗಣಪತಿ ದೇವಸ್ಥಾನದ ಬಳಿ ಕಟ್ಟೆ ಮೇಲೆ ಕುಳಿತಿದ್ದವರ ಮೇಲೆ ಚೂರಿಯಿಂದ ಇರಿಯಲಾಗಿದ್ದು ಪರಿಣಾಮ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಮೃತನನ್ನು ಮಲ್ಲಿನಾಥ್ ಬಿರಾದರ್ ಎಂದು ಗುರುತಿಸಲಾಗಿದೆ. ಮಲ್ಲಿನಾಥ್ ಬಿರಾದರ್ ಸೇರಿದಂತೆ ಇನ್ನಿಬ್ಬರು ಕಟ್ಟೆ ಮೇಲೆ ಕುಳಿತ್ತಿದ್ದಾಗ ಮಾನಸಿಕ ಅಶ್ವಸ್ಥನಾಗಿರುವ ಗಣೇಶ್ ಎಂಬಾತ ಚಾಕುವಿನಿಂದ ಇರಿದಿದ್ದಾನೆ. ಈ ವೇಳೆ ಗಣೇಶನನ್ನು ತಡೆಯಲು ಬಂದ ವ್ಯಕ್ತಿಯ ಮೇಲೂ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ.

ಘಟನೆ ಕುರಿತ ಮಾಹಿತಿ ಸಿಕ್ಕ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಉಪ್ಪಾರಪೇಟೆ ಪೊಲೀಸರು ಗಾಯಗೊಂಡಿದ್ದ ಮೂವರನ್ನು ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ತೀವ್ರ ರಕ್ತಸ್ರಾವದಿಂದ ಮಲ್ಲಿನಾಥ್ ಬಿರಾದರ್ ಮೃತಪಟ್ಟಿದ್ದು ಇನ್ನಿಬ್ಬರಿಗೆ ಚಿಕಿತ್ಸೆ ಮುಂದುವರೆಯುತ್ತಿದೆ.

ಹಿಂದಿನ ಲೇಖನಎಸ್’ಸಿ, ಎಸ್’ಟಿ ಮೀಸಲು ಹೆಚ್ಚಳ ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಪತ್ರ
ಮುಂದಿನ ಲೇಖನಚಿತ್ರ ನಿರ್ದೇಶಕ ಪ್ರದೀಪ್ ಸರ್ಕಾರ್ ನಿಧನ