ಬೆಂಗಳೂರು: ಮೆಜೆಸ್ಟಿಕ್’ನಲ್ಲಿರುವ ಗಣಪತಿ ದೇವಸ್ಥಾನದ ಬಳಿ ಕಟ್ಟೆ ಮೇಲೆ ಕುಳಿತಿದ್ದವರ ಮೇಲೆ ಚೂರಿಯಿಂದ ಇರಿಯಲಾಗಿದ್ದು ಪರಿಣಾಮ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಮೃತನನ್ನು ಮಲ್ಲಿನಾಥ್ ಬಿರಾದರ್ ಎಂದು ಗುರುತಿಸಲಾಗಿದೆ. ಮಲ್ಲಿನಾಥ್ ಬಿರಾದರ್ ಸೇರಿದಂತೆ ಇನ್ನಿಬ್ಬರು ಕಟ್ಟೆ ಮೇಲೆ ಕುಳಿತ್ತಿದ್ದಾಗ ಮಾನಸಿಕ ಅಶ್ವಸ್ಥನಾಗಿರುವ ಗಣೇಶ್ ಎಂಬಾತ ಚಾಕುವಿನಿಂದ ಇರಿದಿದ್ದಾನೆ. ಈ ವೇಳೆ ಗಣೇಶನನ್ನು ತಡೆಯಲು ಬಂದ ವ್ಯಕ್ತಿಯ ಮೇಲೂ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ.
ಘಟನೆ ಕುರಿತ ಮಾಹಿತಿ ಸಿಕ್ಕ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಉಪ್ಪಾರಪೇಟೆ ಪೊಲೀಸರು ಗಾಯಗೊಂಡಿದ್ದ ಮೂವರನ್ನು ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ತೀವ್ರ ರಕ್ತಸ್ರಾವದಿಂದ ಮಲ್ಲಿನಾಥ್ ಬಿರಾದರ್ ಮೃತಪಟ್ಟಿದ್ದು ಇನ್ನಿಬ್ಬರಿಗೆ ಚಿಕಿತ್ಸೆ ಮುಂದುವರೆಯುತ್ತಿದೆ.
ಶಾಲೆಗೆ ಕುಡಿದು ಬರುತ್ತಿದ್ದ ಶಿಕ್ಷಕ ; ಚಪ್ಪಲಿ – ಶೂ ಎಸೆದು ಓಡಿಸಿದ ವಿದ್ಯಾರ್ಥಿಗಳು
ಮತದಾರರಿಗೆ ' ಸಿಹಿ ', ಸುದ್ದಿ..
ಮೋದಿ ಅಭಿಮಾನಿಯ ಕೋರಿಕೆ…
ಪ್ರಸ್ತುತ ಪೊಲೀಸ್ ವ್ಯವಸ್ಥೆಯನ್ನು ಅಣುಕಿಸುತ್ತಿರುವ ಕಾಲ್ಪನಿಕ ಸನ್ನಿವೇಶಗಳು..
ಅಭಿಮಾನಿ ದೇವರುಗಳ ಜೊತೆ ಜಾಕಿ ಚಲನಚಿತ್ರ ವೀಕ್ಷಿಸಿದ ಅಶ್ವಿನಿ ಪುನೀತ್
ಮೈಸೂರು ಮೆಡಿಕಲ್ ಕಾಲೇಜು ಮತ್ತು ಕೆ ಆರ್ ಆಸ್ಪತ್ರೆಯ ಕರ್ಮಕಾಂಡ
ಕರ್ನಾಟಕದ ಹೆಮ್ಮೆಯ ರತ್ನ ಶ್ರೀಮತಿ ಸುಧಾಮೂರ್ತಿಯವರು ರಾಜ್ಯಸಭಾ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಿದರು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.