ಮನೆ ರಾಜಕೀಯ ಕಾಂಗ್ರೆಸ್’ನಿಂದ ಮಾತ್ರ ಬಡವರ ಉದ್ಧಾರ ಸಾಧ್ಯ: ಡಾ. ಯತೀಂದ್ರ ಸಿದ್ದರಾಮಯ್ಯ

ಕಾಂಗ್ರೆಸ್’ನಿಂದ ಮಾತ್ರ ಬಡವರ ಉದ್ಧಾರ ಸಾಧ್ಯ: ಡಾ. ಯತೀಂದ್ರ ಸಿದ್ದರಾಮಯ್ಯ

0

ತಾಂಡವಪುರ: 40% ಲಂಚ ಪಡೆಯುವ ಮೂಲಕ ಭ್ರಷ್ಟಾಚಾರ ಕೂಪವಾಗಿರುವ ಬಿಜೆಪಿಗೆ ಈ ಬಾರಿಯ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಿ, ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದಾಗ ಮಾತ್ರ ಬಡವರ ಉದ್ದಾರ ಸಾಧ್ಯ ಎಂದು ಶಾಸಕ ಡಾ.ಯತಿಂದ್ರ ಸಿದ್ರಾಮಯ್ಯ ತಿಳಿಸಿದರು.

ಅವರು ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಬಿದರಗೂಡು ಗ್ರಾಮದಲ್ಲಿ ಸಾಲ ಕಟ್ಟಡ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಬಳಿಕ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಬಡವರ ಹೆಸರೇಳಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಬಡವರ ಪರವಾದ ಯಾವುದೇ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳದೆ ಕೇವಲ ಶ್ರೀಮಂತರ ಪರವಾಗಿ ಬಿಜೆಪಿ ಸರ್ಕಾರ ಅಧಿಕಾರ ಮಾಡುತ್ತಿದೆ ಎಂದು ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಭ್ರಷ್ಟ ಬಿಜೆಪಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲು ದೇಶದ ಯುವ ಮತದಾರರು ಸಾರ್ವಜನಿಕರು ಮುಂದಾಗಬೇಕು. ಕಾಂಗ್ರೆಸ್ ಸರ್ಕಾರ ಬಂದಾಗ ಮಾತ್ರ ಬಡವರು ದೀನ ದಲಿತರು ರೈತರು ಹಿಂದುಳಿದ ಹಿಂದುಳಿದ ವರ್ಗದವರು ಅಭಿವೃದ್ಧಿ ಹೊಂದಲು ಸಾಧ್ಯ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಬಡವರ ಪರವಾಗಿ ಸರ್ಕಾರವನ್ನು ಅಧಿಕಾರಕ್ಕೆ ತನ್ನಿ ಎಂದು ಮತದಾರರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬಿದಿರುಡು ಗ್ರಾಮದ ಮುಖಂಡರು ಗ್ರಾಮ ಪಂಚಾಯತ್ ಸದಸ್ಯರು ಸೇರಿದಂತೆ ಪಕ್ಷದ ಕಾರ್ಯಕರ್ತರು ಹಾಜರಿದ್ದರು.

ಹಿಂದಿನ ಲೇಖನಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ: ವಿ.ಸೋಮಣ್ಣ
ಮುಂದಿನ ಲೇಖನಕಾಗದ ಬಂದಿದೆ ನಮ್ಮ ಕಮಲನಾಭನದು