ಬೆಂಗಳೂರು: ವಾಹನ ಸವಾರರು ಸಂಚಾರ ನಿಯಮ ಉಲ್ಲಂಘಿಸುವುದು ಕಂಡುಬಂದರೆ ಮಾತ್ರ ತಡೆಯಿರಿ. ಇಲ್ಲದಿದ್ರೆ ವಾಹನ ಸವಾರರನ್ನು ತಡೆಯಬೇಡಿ ಎಂದು ಡಿಜಿ ಐಜಿಪಿ ಅಲೋಕ್ ಮೋಹನ್ ಸಂಚಾರ ನಿಯಮಗಳಿಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿ ಹೊರಡಿಸಿದ್ದಾರೆ.
ಪೀಕ್ ಅವರ್ ಟ್ರಾಫಿಕ್ ಪ್ರಾರಂಭವಾಗುವ ಮೊದಲೇ ಸಂಚಾರಿ ಪೊಲೀಸರು ಆಯಾ ಸ್ಥಳಗಳಲ್ಲಿ ನಿಯೋಜಿಸಿಕೊಳ್ಳಬೇಕು. ಸಂಚಾರಿ ಪೊಲೀಸ್ ಸಿಬ್ಬಂದಿ ದಟ್ಟಣೆಯ ಸಮಯಕ್ಕಿಂತ ಮೊದಲು ತಮ್ಮ ಗೊತ್ತುಪಡಿಸಿದ ಪ್ರದೇಶಗಳಲ್ಲಿ ಕರ್ತವ್ಯಕ್ಕೆ ಹಾಜರಾಗಬೇಕು. ಈ ಹೊಸ ಕ್ರಮವು ರಿಯಲ್ ಟೈಮ್ ನಲ್ಲಿ ಸಂಚಾರ ದಟ್ಟಣೆಯನ್ನು ತಡೆಗಟ್ಟಲು ಸಹಾಯ ಮಾಡಲಿದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಖಚಿತಪಡಿಸಿಕೊಳ್ಳಲು, ಸಂಚಾರಿ ಪೊಲೀಸರು ಸಾಧ್ಯವಾದಾಗಲೆಲ್ಲಾ ದೇಹಕ್ಕೆ ಧರಿಸಿರುವ ಕ್ಯಾಮೆರಾಗಳನ್ನು ಧರಿಸಿಕೊಳ್ಳಬೇಕು. ಈ ಕ್ರಮವು ವಿವಾದಗಳು ಅಥವಾ ದೂರುಗಳ ಪ್ರಕರಣಗಳಲ್ಲಿ ಸಾಕ್ಷ್ಯವನ್ನು ಒದಗಿಸುತ್ತವೆ.
ಅಲ್ಲದೇ, ಪಾರ್ಕಿಂಗ್ ಮಾಲು ನಿರ್ಬಂಧ ಇರುವ ಪ್ರದೇಶಗಳಲ್ಲಿ ನಿಲುಗಡೆ ಮಾಡುವ ವಾಹನಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ. ಅಂತಹ ಸಂದರ್ಭಗಳಲ್ಲಿ ವಾಹನಗಳನ್ನು ಕೂಡಲೇ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು. ಸಹಾಯಕ ಸಬ್ ಇನ್ಸ್ಪೆಕ್ಟರ್ (ಎಎಸ್ ಐ) ಮತ್ತು ಇತರ ಅಧಿಕಾರಿಗಳು ತಮ್ಮ ವಿವೇಚನೆಯ ಆಧಾರದ ಮೇಲೆ, ಅವರ ಅಧಿಕಾರದ ವ್ಯಾಪ್ತಿಯಲ್ಲಿ ಸಂಚಾರ ಉಲ್ಲಂಘನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರ ಹೊಂದಿದ್ದಾರೆ ಎಂದು ಡಿಜಿ ಐಜಿಪಿ ಅಲೋಕ್ ಮೋಹನ್ ಹೇಳಿದ್ದಾರೆ.














