ಮಂಡ್ಯ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಫರ್ಧೆ ಮಾಡದೇ, ಎನ್ ಡಿಎ ಮೈತ್ರಿ ಅಭ್ಯರ್ಥಿಯಾದ ಎಚ್.ಡಿ.ಕುಮಾರಸ್ವಾಮಿಗೆ ಬೆಂಬಲ ನೀಡುವುದಾಗಿ ಬುಧವಾರ (ಏಪ್ರಿಲ್ 03) ಘೋಷಿಸಿದ್ದಾರೆ.
ಮಂಡ್ಯದಲ್ಲಿ ನಡೆದ ಬೆಂಬಲಿಗರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸುಮಲತಾ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತಿಲ್ಲ ಎಂದು ಹೇಳುವ ಮೂಲಕ ಜಿದ್ದಾಜಿದ್ದಿನ ಕಣದಿಂದ ಹಿಂದೆ ಸರಿದಂತಾಗಿದೆ.
ಬೆಂಬಲಿಗರ ಸಭೆಗೂ ಮುನ್ನ ಸುಮಲತಾ ಅಂಬರೀಶ್ ಅವರು ಕಾಳಿಕಾಂಬ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ಸ್ಯಾಂಡಲ್ ವುಡ್ ನಟ ದರ್ಶನ್, ಅಭಿಷೇಕ್ ಅಂಬರೀಶ್ ಜತೆಗಿದ್ದರು.
ಕಳೆದ ಚುನಾವಣೆ ಒಂದು ರೀತಿಯ ಸವಾಲು ಒಡ್ಡಿದ್ದರೆ, ಈ ಬಾರಿಯದ್ದು ಮತ್ತೊಂದು ತೆರನಾದ ಸವಾಲಾಗಿದೆ. ಕೆಲವರು ಪಕ್ಷೇತರವಾಗಿ ಸ್ಪರ್ಧಿಸಿ ಎಂದು ಸಲಹೆ ನೀಡಿದ್ದರು. ಬಿಜೆಪಿ(BJP) ಕೂಡಾ ನನಗೆ ಹಲವಾರು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಆಫರ್ ನೀಡಿತ್ತು. ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರೊಬ್ಬರು ಸುಮಲತಾ ಅವಶ್ಯಕತೆ ನಮಗಿಲ್ಲ ಎಂದು ಹೇಳಿದ್ದಾರೆ. ಹಾಗಾಗಿ ನಾನು ನನ್ನ ಕಾರ್ಯಕರ್ತರಿಗೆ ಶಕ್ತಿ ತುಂಬಬೇಕಾದರೆ, ನನ್ನ ನಿರ್ಧಾರವನ್ನು ತಿಳಿಸಬೇಕಾದ ಅವಶ್ಯಕತೆ ಇದೆ ಎಂದು ಸುಮಲತಾ ಹೇಳಿದರು.
ನಾನು ಮಂಡ್ಯ ಬಿಟ್ಟು ಎಲ್ಲೂ ಹೋಗಲ್ಲ, ನನ್ನ ಬೆಂಬಲಿಗರ ಜತೆ ನಾನು ಸದಾ ಇರುತ್ತೇನೆ. ಅಧಿಕಾರಕ್ಕೆ ಬರುತ್ತೆ, ಹೋಗುತ್ತೆ. ಆದರೆ ಪ್ರೀತಿ ಮುಖ್ಯ. ನಾನು ಪಕ್ಷೇತರ ಸಂಸದೆಯಾದರು ಕೂಡಾ ನಾಲ್ಕು ಸಾವಿರ ಕೋಟಿ ರೂಪಾಯಿ ಅನುದಾನ ನೀಡಿದ್ದು ಬಿಜೆಪಿ ಪಕ್ಷ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಹೀಗಾಗಿ ನಾನು ಶೀಘ್ರದಲ್ಲೇ ಬಿಜೆಪಿ ಪಕ್ಷ ಸೇರಲು ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಸುಮಲತಾ ಅವರು ಘೋಷಿಸುವ ಮೂಲಕ ಮಂಡ್ಯ ಕ್ಷೇತ್ರದ ರಾಜಕೀಯ ಅಖಾಡದಲ್ಲಿನ ಕುತೂಹಲಕ್ಕೆ ತೆರೆ ಬಿದ್ದಂತಾಗಿದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.