ಮನೆ ರಾಷ್ಟ್ರೀಯ ಲೋಕಸಭೆ ಅಧಿವೇಶನದಲ್ಲಿ ಪ್ರತಿಪಕ್ಷಗಳ ಗದ್ದಲ: ನ.27ಕ್ಕೆ ಕಲಾಪ ಮುಂದೂಡಿಕೆ

ಲೋಕಸಭೆ ಅಧಿವೇಶನದಲ್ಲಿ ಪ್ರತಿಪಕ್ಷಗಳ ಗದ್ದಲ: ನ.27ಕ್ಕೆ ಕಲಾಪ ಮುಂದೂಡಿಕೆ

0

ನವದೆಹಲಿ: ವಿವಿಧ ವಿಷಯಗಳ ಕುರಿತು ಪ್ರತಿಪಕ್ಷಗಳ ಸದಸ್ಯರ ಗದ್ದಲದ ನಡುವೆ ಸೋಮವಾರ ಯಾವುದೇ ಮಹತ್ವದ ಕಲಾಪ ನಡೆಯದೆ ಲೋಕಸಭೆ ಅಧಿವೇಶನವನ್ನು ಬುಧವಾರದವರೆಗೆ ಮುಂದೂಡಲಾಯಿತು.

Join Our Whatsapp Group

ವಿರಾಮದ ಬಳಿಕ 12 ಗಂಟೆಗೆ ಸದನ ಸೇರಿದ ಬಳಿಕ ಪ್ರತಿಪಕ್ಷದ ಸದಸ್ಯರು ಉತ್ತರ ಪ್ರದೇಶದ ಸಂಭಲ್‌ನಲ್ಲಿ ನಡೆದ  ಹಿಂಸಾಚಾರ ಖಂಡಿಸಿ ಘೋಷಣೆಗಳನ್ನು ಕೂಗಿದರು. ಜತೆಗೆ ಅಮೆರಿಕ ನ್ಯಾಯಾಲಯದಲ್ಲಿ ಉದ್ಯಮಿ ವಿರುದ್ಧದ ಆರೋಪಗಳ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.

ವಿಪಕ್ಷಗಳ ಗದ್ದಲದ ಹಿನ್ನೆಲೆ ಸಭಾಪತಿ ಕಲಾಪವನ್ನು ಬುಧವಾರಕ್ಕೆ ಮುಂದೂಡಿದರು.

ಅಧಿವೇಶನದ ಮೊದಲ ದಿನದಂದು ಸದನವು ಸಭೆ ಸೇರಿದ ತಕ್ಷಣ, ಮಹಾರಾಷ್ಟ್ರದ ನಾಂದೇಡ್ ಕ್ಷೇತ್ರದಿಂದ ಸದನಕ್ಕೆ ಚುನಾಯಿತರಾಗಿದ್ದ ವಸಂತರಾವ್ ಚವಾಣ್ ಮತ್ತು ಪಶ್ಚಿಮ ಬಂಗಾಳದ ಬಸಿರ್ಹತ್ ಕ್ಷೇತ್ರದಿಂದ ಚುನಾಯಿತರಾಗಿದ್ದ ಎಸ್ಕೆ ನೂರುಲ್ ಇಸ್ಲಾಂ ಅವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು.