ಮನೆ ಸ್ಥಳೀಯ ಮೈಸೂರು ಲೋಕಸಭಾ ಕ್ಷೇತ್ರವನ್ನು ಸೋಲಲು ನಮ್ಮ ಅಭ್ಯರ್ಥಿಯೇ ಕಾರಣ: ಹರೀಶ್ ಗೌಡ

ಮೈಸೂರು ಲೋಕಸಭಾ ಕ್ಷೇತ್ರವನ್ನು ಸೋಲಲು ನಮ್ಮ ಅಭ್ಯರ್ಥಿಯೇ ಕಾರಣ: ಹರೀಶ್ ಗೌಡ

0

ಮೈಸೂರು: ಲೋಕೋಪಯೋಗಿ ಸಚಿವ ಸತೀಶ್​ ಜಾರಕಿಹೊಳಿ ಮೈಸೂರು ಜಿಲ್ಲೆ ಪ್ರವಾಸ ಕೈಗೊಂಡಿದ್ದು, ಸಚಿವ ಸತೀಶ್​ ಜಾರಕಿಹೊಳಿ ಇಂದು (ಅ.08) ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ, ಶಾಸಕ ಹರೀಶ್ ಗೌಡ ಅವರ ನಿವಾಸಕ್ಕೆ ಭೇಟಿ ನೀಡಿದರು.

Join Our Whatsapp Group

ಶಾಸಕ ಹರೀಶ್ ಗೌಡ ಜೊತೆ ಮೈಸೂರು ರಾಜಕಾರಣದ ಬಗ್ಗೆ ಚರ್ಚೆ ನಡೆಸಿದರು. ಈ ವೇಳೆ ಸತೀಶ್​ ಜಾರಕಿಹೊಳಿ ಲೋಕಸಭೆ ಚುನಾವಣೆಯಲ್ಲಿ ಮೈಸೂರು ಕ್ಷೇತ್ರ ಗೆಲ್ಲಬಹುದಿತ್ತು, ಯಾಕೆ ಸಾಧ್ಯವಾಗಲಿಲ್ಲ ಎಂದು ಹರೀಶ್​ ಗೌಡ ಅವರಿಗೆ ಪ್ರಶ್ನಿಸಿದರು.

ಇದಕ್ಕೆ, ಕಾಂಗ್ರೆಸ್​ ಶಾಸಕ ಹರೀಶ್​ ಗೌಡ “ನಮ್ಮ ಪಕ್ಷದ ಅಭ್ಯರ್ಥಿ ಸರಿ ಇಲ್ಲದಿದ್ದಕ್ಕೆ ಮೈಸೂರು ಲೋಕಸಭಾ ಕ್ಷೇತ್ರ ಗೆಲ್ಲಲಿಲ್ಲ” ಎಂದು ಹೇಳಿದ್ದಾರೆ. ಕಳೆದ ಲೋಕಾಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಕೆಪಿಸಿಸಿ ವಕ್ತಾರ ಎಂ.ಲಕ್ಷಣ್ ಸ್ಪರ್ಧೆ ಮಾಡಿದ್ದರು.

ಕಳೆದ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಪ್ರಮುಖ ಕ್ಷೇತ್ರಗಳಲ್ಲಿ ಮೈಸೂರು ಕೂಡ ಒಂದಾಗಿತ್ತು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಯದುವೀರ್ ​ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಸ್ಪರ್ಧಿಸಿ ಗೆಲವು ಸಾಧಿಸಿದ್ದಾರೆ. ಇವರಿಗೆ ಪ್ರತಿಸ್ಪರ್ಧಿಯಾಗಿ ಕಾಂಗ್ರೆಸ್​ನಿಂದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್​ ಸ್ಪರ್ಧೆ ಮಾಡಿದ್ದರು.