ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ವಿವಾದದಲ್ಲಿ ಸಿಲುಕಿರುವ ಸಂಸದ ಪ್ರಜ್ವಲ್ ರೇವಣ್ಣ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವಿದೆ, ಅವರು ಇನ್ನೂ ಏಕೆ ಕ್ರಮ ಕೈಗೊಂಡಿಲ್ಲ? ಜೆಡಿಎಸ್ ಕೂಡ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಮಹಿಳೆಯರನ್ನು ಅವಮಾನಿಸಬಾರದು. ಇದನ್ನು ನಾವು ಬಲವಾಗಿ ಖಂಡಿಸುತ್ತೇವೆ ಎಂದರು.
ನಾವು ದೇಶದ ಮಾತೃಶಕ್ತಿಯೊಂದಿಗಿದ್ದೇವೆ, ಮಹಿಳಾ ಶಕ್ತಿಯೊಂದಿಗೆ ನಿಲ್ಲುತ್ತೇವೆ ಎಂಬುದು ಭಾರತೀಯ ಜನತಾ ಪಕ್ಷದ ನಿಲುವು ಸ್ಪಷ್ಟವಾಗಿದೆ. ಮಾತೃಶಕ್ತಿಗೆ ಮಾಡಿದ ಅವಮಾನವನ್ನು ಎಂದೂ ಸಹಿಸುವುದಿಲ್ಲ ಎಂಬ ಬದ್ಧತೆಯನ್ನು ನರೇಂದ್ರ ಮೋದಿಯವರು ಹೊಂದಿದ್ದಾರೆ.
ನಮ್ಮ ಮೇಲೆ ಆರೋಪ ಮಾಡಲು ಹೊರಟಿರುವ ಕಾಂಗ್ರೆಸ್ ಪಕ್ಷಕ್ಕೆ ನಾನೊಂದು ಸಣ್ಣ ವಿಚಾರವನ್ನು ಕೇಳಬಯಸುತ್ತೇನೆ, ಅಲ್ಲಿ ಯಾವ ಸರ್ಕಾರವಿದೆ. ಇದುವರೆಗೂ ಏಕೆ ಕ್ರಮ ಕೈಗೊಂಡಿಲ್ಲ? ಕಾನೂನು ಸುವ್ಯವಸ್ಥೆಯ ವಿಷಯ ರಾಜ್ಯ ಸರ್ಕಾರಕ್ಕೆ ಸೇರಿದ್ದು. ನಾನು ಪ್ರಿಯಾಂಕಾ ಗಾಂಧಿಗೆ ಹೇಳಲು ಬಯಸುತ್ತೇನೆ, ನಮ್ಮನ್ನು ಪ್ರಶ್ನಿಸುವ ಬದಲು ಅವರು ತಮ್ಮ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ಬಳಿ ಏಕೆ ತನಿಖೆ ನಡೆಸುತ್ತಿಲ್ಲ ಎಂದು ಕೇಳಲಿ ಎಂದು ಹೇಳಿದ್ದಾರೆ.
ನಾವು ತನಿಖೆಯ ಪರವಾಗಿದ್ದೇವೆ ಮತ್ತು ನಮ್ಮ ಮಿತ್ರ ಪಕ್ಷ ಜೆಡಿಎಸ್ ಕೂಡ ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ ಎಂದು ಅಮಿತ್ ಶಾ ಹೇಳಿದರು.
ಇಂದು ಅವರ ಕೋರ್ ಕಮಿಟಿ ಸಭೆ ನಡೆಯಲಿದ್ದು, ಮುಂದಿನ ಕಟ್ಟುನಿಟ್ಟಿನ ಕ್ರಮವನ್ನು ನಿರೀಕ್ಷಿಸಲಾಗಿದೆ.
T20 ವಿಶ್ವಕಪ್ ನಲ್ಲಿ ಕನ್ನಡ ರಾರಾಜಿಸಲಿದೆ.
ಕೆಎಸ್ಆರ್ಟಿಸಿ ಬಸ್ನ ಕಿಟಕಿಯಲ್ಲಿ ಮಹಿಳೆಯ ತಲೆ ಲಾಕ್.
ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ….
ಪ್ರಜ್ವಲ್ ರೇವಣ್ಣ ಬಗ್ಗೆ ನನಗೆ ಏನೂ ಗೊತ್ತಿಲ್ಲ…
ಭ್ರಷ್ಟಾಚಾರದ ಪೆನ್ ಡ್ರೈವ್ ನಿಮಗೆ ಕೊಡುತ್ತೇನೆ ಅದರ ವಿರುದ್ಧ ಕ್ರಮ ತೆಗೆದುಕೊಳ್ಳುವ ತಾಕತ್ತು ಇದೆಯಾ..?
E ಪಾಸ್ ಕಡ್ಡಾಯ
ಆರು ಮರಿಗಳಿಗೆ ಜನ್ಮ ನೀಡಿದ ಚಾರ್ಲಿ
ಚುನಾವಣೆಯಲ್ಲಿ "ಕೈ" ಅಭ್ಯರ್ಥಿಯ ಗಿಫ್ಟ್ ಬಾಕ್ಸ್ ಸೀಜ್
ಗಿಫ್ಟ್ "ಪೊಲಿಟಿಕ್ಸ್"
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.