ಚಾಮರಾಜನಗರ(Chamarajanagara): ಜುಲೈ ಅಂತ್ಯ ಹಾಗೂ ಆಗಸ್ಟ್ ವಾರದ ಆರಂಭದಲ್ಲಿ ಕೇರಳ ಮತ್ತು ರಾಜ್ಯದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕೆರೆ ಕಟ್ಟೆಗಳು ತುಂಬಿ ತುಳುಕುತ್ತಿದ್ದು, ಪ್ರಾಣಿ ಪಕ್ಷಿಗಳು ಸ್ವಚ್ಛಂದವಾಗಿ ವಿಹರಿಸುತ್ತಿವೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ 373 ಕೆರೆಗಳಿದ್ದು, ಇವುಗಳಲ್ಲಿ 350ಕ್ಕೂ ಹೆಚ್ಷು ಕೆರೆಗಳು ತುಂಬಿವೆ. ಸಫಾರಿಗರ ಕಣ್ಣಿಗೆ ಹಬ್ಬದ ನೋಟವನ್ನೇ ಕಾಡು ಕಣ್ತುಂಬಿಸುತ್ತಿದೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶವು ತಮಿಳುನಾಡಿನ ಮಧುಮಲೈ, ಕೇರಳದ ವೈನಾಡು ವನ್ಯಜೀವಿ ಅಭಯಾರಣ್ಯಕ್ಕೆ ಹೊಂದಿಕೊಂಡಿದ್ದು, ಈ ಭಾಗದಲ್ಲಿ ಸತತವಾಗಿ ಮಳೆಯಾದ್ದರಿಂದ 13 ವಲಯಗಳಲ್ಲಿನ 350 ಕೆರೆಗಳು ಭರ್ತಿಯಾಗಿರುವುದು ಪರಿಸರ ಪ್ರೇಮಿಗಳ ಸಂತಸಕ್ಕೆ ಕಾರಣವಾಗಿದೆ.
ಮಳೆಗಾಲದಲ್ಲಿ ಜಲ ಮೂಲಗಳಿಂದ ತುಂಬುವ ಕೆರೆಗಳು ಬೇಸಿಗೆಯಲ್ಲಿ ಪ್ರಾಣಿಗಳಿಗೆ ನೀರಿನ ದಾಹ ತೀರಿಸುತ್ತವೆ. ಸದಾ ಕಾಡಿನ ಕೆರೆಗಳಲ್ಲಿ ನೀರು ಇರಬೇಕು, ಪ್ರಾಣಿಗಳಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಕೆಲವೆಡೆ ಸೋಲಾರ್ ಪಂಪ್ಗಳ ಮೂಲಕವೂ ಕೆರೆಗೆ ನೀರು ತುಂಬಿಸಲಾಗುತ್ತಿತ್ತು. ಆದರೆ, ಈಗಾಗಲೇ ಕೆರೆಗಳು ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಬೇಸಿಗೆಯಲ್ಲಿ ಅಷ್ಟೇನೂ ನೀರಿನ ಕೊರತೆ ಬಾಧಿಸದು ಎಂಬ ವಿಶ್ವಾಸದಲ್ಲಿ ಅರಣ್ಯ ಇಲಾಖೆಯಿದೆ.
ಬಂಡೀಪುರ ವಲಯದ ನೀಲಕಂಠರಾವ್ ಕೆರೆ, ಸೊಳ್ಳಿಕಟ್ಟೆ, ತಾವರಗಟ್ಟೆ, ಕುಂದುಕೆರೆ ವಲಯದ ಮಾಲಗಟ್ಟೆ, ಕಡಬೂರುಕಟ್ಟೆ, ದೇವರ ಮಾಡು, ಗೋಪಾಲಸ್ವಾಮಿ ಬೆಟ್ಟ ವಲಯದ ಹಿರಿ ಕೆರೆ ಕೋಳಚಿಕಟ್ಟೆ, ಹಗ್ಗದಹಳ್ಳದ ಕಟ್ಟೆ ಮುಂತಾದ ಕೆರೆಗಳು ತುಂಬಿವೆ. ಎಲ್ಲ ವಲಯದಲ್ಲಿ ಮಳೆಯಾಗಿರುವುದರಿಂದ ಹಸಿರು ಸಹ ಉತ್ತಮವಾಗಿದ್ದು ಮೇವು ಸಮೃದ್ಧವಾಗಿದೆ. ನುಗು, ಯಡಿಯಲ, ಓಂಕಾರ, ಮೊಳೆಯೂರು ವಲಯದ ಭಾಗದಲ್ಲಿರುವ ಕೆರೆಗಳು ಸಹ ಭರ್ತಿಯಾಗಿದೆ.
ಸಫಾರಿ ವಲಯದಲ್ಲಂತೂ ಕಾಡು ಹಚ್ಚಹಸಿರು ಹೊದ್ದು ನಿಂತಿದ್ದು ಆನೆ, ಕಾಡೆಮ್ಮೆ, ಜಿಂಕೆಗಳ ಹಿಂಡು ಆಗಾಗ್ಗೆ ಹುಲಿಗಳು ಕಾಣಸಿಗುತ್ತಿದೆ.
ಬರುತ್ತಿದೆ ಅಯೋಧ್ಯ ರಾಮನ "ಬಯೋ ಪಿಕ್"…
ವಿಶ್ವ ದಾಖಲೆ ನಿರ್ಮಿಸಿದ ಭಾರತೀಯ ಬಾಲಕಿ…
ವಿಮಾನದಲ್ಲಿ ನಮಾಜ್
ಬಿಡುಗಡೆಯಾಗಿದೆ, ಜಗತ್ತಿನ ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿ
ನಟಿ ಹರ್ಷಿಕ ಪೂರ್ಣಚ್ಚ ಹಾಗೂ ನಟ ಭುವನ್ ಮೇಲೆ ಹಲ್ಲೆ.
ಶಿಲ್ಪಾ ಶೆಟ್ಟಿ ರಾಜ್ ಕುಂದ್ರಾಗೆ ಎದುರಾಗಿದೆ ಸಂಕಷ್ಟ
ಮತದಾನದ ನಂತರ ಸಾವನಪ್ಪಿದ ವೃದ್ಧ….
ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ…
ಜೈ ಶ್ರೀ ರಾಮ್ ಎಂದು ಕೂಗಿದ್ದಕ್ಕೆ, ಮುಸ್ಲಿಂ ಯುವಕರಿಂದ ಹಲ್ಲೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.