ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೆಂಗಳೂರು – ಚಿಕ್ಕಮಗಳೂರು ಹೆದ್ದಾರಿಯಲ್ಲಿ ಹಾಸನದಿಂದ 10 ಕಿ.ಮೀ. ದೂರದಲ್ಲಿರುವ ಅರೆಮಲೆನಾಡಿನ ಪುಟ್ಟ ಗ್ರಾಮ ಶಂಖ. ಪಾಂಚಜನ್ಯಪುರ ಎಂದೂ ಖ್ಯಾತವಾದ ಈ ಗ್ರಾಮದಲ್ಲಿರುವ ಪುಟ್ಟ ಗುಡ್ಡದ ಮೇಲೆ ನಾಲ್ಕು ಅಂಕಣದ ಪುಟ್ಟ ದೇವಾಲಯವಿದೆ. ಈ ದೇವಾಲಯದಲ್ಲಿ ಮುಖಮಂಟಪ, ಸುಖನಾಸಿ, ಗರ್ಭಗೃಹವಿದ್ದು, ಈ ದೇವಾಲಯ ಸುಮಾರು 900 ವರ್ಷಗಳಷ್ಟು ಪಾರಾತನವಾದದ್ದು ಎಂದು ತಿಳಿದುಬಂದಿದೆ.
ಗರ್ಭಗೃಹದಲ್ಲಿ 6 ಅಡಿ ಎತ್ತರದ ಹೊಯ್ಸಳ ಶೈಲಿಯ ಶ್ರೀ ಚನ್ನಕೇಶವಸ್ವಾಮಿಯ ಸುಂದರ ವಿಗ್ರಹವಿದೆ. ಕೇಶವ ತನ್ನ ಎರಡು ಕೈಗಳಲ್ಲಿ ಶಂಖ, ಚಕ್ರಗಳನ್ನೂ ಮುಂದಿನ ಎರಡು ಕೈಗಳಲ್ಲಿ ಗದೆ ಹಾಗೂ ಪದ್ಮವನ್ನೂ ಹಿಡಿದಿದ್ದಾನೆ.
ಹಿಂದಿರುವ ಪ್ರಭಾವಳಿಯಲ್ಲಿ ಸುಂದರ, ಮೋಹಕ ಕೆತ್ತನೆಗಳಿವೆ.
ಭಕ್ತರ ಬಯಕೆಗಳನ್ನು ಸದಾ ಈಡೇರಿಸುವ ಈ ಕೇಶವನ ಮಹಿಮೆಯ ಬಗ್ಗ ಹಲವಾರು ಕಥೆಗಳಿವೆ. ಬಹು ಶಿಥಿಲವಾಗಿದ್ದ ಈ ದೇವಾಲಯ ಜೀರ್ಣೋದ್ಧಾರಕ್ಕಾಗಿ ಗ್ರಾಮಸ್ಥರು ಶ್ರೀ ಚನ್ನಕೇಶವ ವೈಷ್ಣವ ಸೇವಾ ಸಮಿತಿ ರಚಿಸಿ, ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗಡೆ ಅವರ ಮಾರ್ಗದರ್ಶನದಲ್ಲಿ ಹಾಗೂ ಧರ್ಮೋತ್ಥಾನ ಟ್ರಸ್ಟ್ ನೆರವಿನಿಂದ ದೇವಾಲಯಕ್ಕೆ ಕಾಯಕಲ್ಪ ನೀಡಿದ್ದಾರೆ.
ಈ ದೇವಾಲಯದ ಈಶಾನ್ಯ ಭಾಗದಲ್ಲಿ ಗುಹೆಯೊಂದಿದ್ದು, ಇಲ್ಲಿಂದ ಬೇಲೂರಿಗೆ ಹೋಗಲು ಸುರಂಗ ಮಾರ್ಗವಿದೆ ಎಂದೂ ಜನ ಹೇಳುತ್ತಾರೆ.
ದೇವಾಲಯಕ್ಕೆ ಹೊಯ್ಸಳರ ದೊರೆಗಳು ಅಪಾರವಾದ ನಗ, ನಾಣ್ಯ, ಪಂಚಲೋಹದ ವಿಗ್ರಹಗಳನ್ನು ನೀಡಿದ್ದಾರೆ. ಇಲ್ಲಿರುವ ತಟ್ಟೆ, ತಂಬಿಕೆ, ಹರಿವಾಣಗಳು ಪ್ರಾಚೀನತೆಯ ಸಂಕೇತವಾಗಿವೆ.