ಮನೆ ರಾಜಕೀಯ ಸಿದ್ದರಾಮಯ್ಯ ಬಳಿಕ ಪರಮೇಶ್ವರ್ ಮುಖ್ಯಮಂತ್ರಿ ಆಗುತ್ತಾರೆ: ಸಚಿವ ಕೆ.ಎನ್ ರಾಜಣ್ಣ

ಸಿದ್ದರಾಮಯ್ಯ ಬಳಿಕ ಪರಮೇಶ್ವರ್ ಮುಖ್ಯಮಂತ್ರಿ ಆಗುತ್ತಾರೆ: ಸಚಿವ ಕೆ.ಎನ್ ರಾಜಣ್ಣ

0

ತುಮಕೂರು: ಸಿದ್ದರಾಮಯ್ಯ ಅವರು ಯಾವಾಗ ಬಿಡುತ್ತಾರೆ, ಆಗ ಪರಮೇಶ್ವರ್ ಮುಖ್ಯಮಂತ್ರಿ ಆಗುತ್ತಾರೆ  ಎಂದು ಸಚಿವ ಕೆ.ಎನ್ ರಾಜಣ್ಣ ಹೇಳಿದರು.

ತುಮಕೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಜೀವಮಾನದಲ್ಲಿ ಏನೆಲ್ಲಾ ಹೇಳಿದ್ದೇನೆ ಅದು ಯಾವುದು ಸುಳ್ಳಾಗಿಲ್ಲ.  ನಾನು ಹೇಳಿದ ಯಾವ ವಿಚಾರವು ಅಸತ್ಯವಾಗಿಲ್ಲ. ಪರಮೇಶ್ವರ್ ಸಿಎಂ ಆಗುತ್ತಾರೆ ಎಂಬುವ ವಿಚಾರವು ಸಹ ಅಸತ್ಯವಾಗಲ್ಲ ಎಂದು ಹೇಳಿದ್ದಾರೆ.

ಈ ಅವಧಿಯಲ್ಲಿ ಪರಮೇಶ್ವರ್ ಸಿಎಂ ಆಗುತ್ತಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು ಹೌದು ಆಗುತ್ತಾರೆ. ನನಗೆ ಸಚಿವನಾಗಿರುವುದು ಸಾಕು. ನನಗೆ ಯಾವುದೇ ಡಿಸಿಎಂ ಹುದ್ದೆ ಬೇಡ‌. ನಾನು ಇಲ್ಲಿಯ ತನಕ ಬಂದಿರೋದೆ ಹೆಚ್ಚು ಎಂದರು.

ಹಿಂದಿನ ಲೇಖನಗಜೇಂದ್ರಗಡ ಕೋಟೆ
ಮುಂದಿನ ಲೇಖನಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ: ಐವರ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ