ವಿಜಯಪುರ: ನಗರದ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರಣ ಆಭರಣ ಕಳ್ಳತನ ಪ್ರಕರಣದಲ್ಲಿ ನಗರದ ಪೊಲೀಸರು ಕಲಬುರಗಿ ಮೂಲದ ಮೂವರು ಅಂತರ ಜಿಲ್ಲಾ ಕಳ್ಳಿಯರನ್ನು ಬಂಧಿಸಿದ್ದು, 8.70 ಲಕ್ಷ ರೂ. ಮೌಲ್ಯದ 146 ಗ್ರಾಂ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ.
ಕಳ್ಳತನ ಆರೋಪದಲ್ಲಿ ಬಂಧಿತರನ್ನು ಕಲಬುರಗಿ ನಗರದ ಬಾಪು ನಗರ ನಿವಾಸಿಗಳಾದ 56 ವರ್ಷದ ಗಂಗೂಬಾಯಿ ನಾರಾಯಣ ಕಾಳೆ, 44 ವರ್ಷದ ನರಸಮ್ಮ ಅಮಿತ ಕುಮಾರ ಪಾಟೀಲ ಹಾಗೂ 35 ವರ್ಷದ ಕರಿಷ್ಮಾ ಸಹದೇವ ಉಪಾದ್ಯೆ ಎಂದು ಗುರುತಿಸಲಾಗಿದೆ.
ಬಂಧಿತರು ನಗರದ ಕೇಂದ್ರ ಬಸ್ ನಿಲ್ದಾಣ ಹಾಗೂ ಸೆಟ್ ಲೈಟ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಆಭರಣಗಳನ್ನು ಕಳ್ಳತನ ಮಾಡುತ್ತಿದ್ದರು.
ಈ ಕುರಿತು ದೂರುಗಳು ಬಂದ ಹಿನ್ನೆಲೆಯಲ್ಲಿ ಎಸ್ಪಿ ಋಷಿಕೇಶ ಭಗವಾನ್ ಅವರು ಗಾಂಧಿಚೌಕ್ ಸಿಪಿಐ ಮಹಾಂತೇಶ ದ್ಯಾಮಣ್ಣವರ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಿದ್ದರು.
ಪೊಲೀಸರ ತನಿಖಾ ತಂಡ ಅಂತರ ಜಿಲ್ಲಾ ಮೂವರು ಕಳ್ಳಿಯರನ್ನು ಬಂಧಿಸಿ, 8.70 ಲಕ್ಷ ರೂ. ಮೌಲ್ಯದ 146 ಗ್ರಾಂ ಚಿನ್ನಾಭರಣಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಮೂವರು ಬಂಧಿತರು ನಡೆಸಿದ ನಾಲ್ಕು ಕಳ್ಳತನ ಪ್ರಕರಣಗಳನ್ನು ಪತ್ತೆ ಮಾಡಿರುವ ತನಿಖಾ ತಂಡಕ್ಕೆ ಎಸ್ಪಿ ಋಷಿಕೇಶ ಭಗವಾನ್ ಬಹುಮಾನ ಘೋಷಿಸಿದ್ದಾರೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.