ಮನೆ ರಾಜ್ಯ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು ಆರೋಪ: ಪರಿಹಾರ ನೀಡುವಂತೆ ಒತ್ತಾಯಿಸಿ ಸಂಬಂಧಿಕರಿಂದ ಪ್ರತಿಭಟನೆ

ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು ಆರೋಪ: ಪರಿಹಾರ ನೀಡುವಂತೆ ಒತ್ತಾಯಿಸಿ ಸಂಬಂಧಿಕರಿಂದ ಪ್ರತಿಭಟನೆ

0

ಮಂಡ್ಯ: ಬಿಜಿಎಸ್ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಬಳಿಯ ಆಸ್ಪತ್ರೆ ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ.

Join Our Whatsapp Group

ಬಿಜಿಎಸ್ ಆಸ್ಪತ್ರೆ ವೈದ್ಯರ ವಿರುದ್ದ ಕರ್ತವ್ಯ ಲೋಪ ಆಗಿದೆ ಎಂದು ಮೃತ ರೋಗಿಯ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ 25 ದಿನಗಳ ಹಿಂದೆ ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದ ಹನುಮನಕೊಪ್ಪಲು ಗ್ರಾಮದ ಚಂದ್ರ(40) ಇಂದು ಮೃತಪಟ್ಟಿದ್ದಾರೆ. ಚಂದ್ರ ಸಾವಿಗೆ ವೈದ್ಯರ ನಿರ್ಲಕ್ಷ್ಯ ಎಂದು ಕುಟುಂಬಸ್ಥರು ಆರೋಪಿಸಿದ್ದು, ಚಂದ್ರು ಸಾವಿಗೆ ಪರಿಹಾರ ನೀಡಬೇಕೆಂದು ಸಂಬಂಧಿಕರು ಮತ್ತು ಗ್ರಾಮಸ್ಥರ ಒತ್ತಾಯಿಸಿದ್ದಾರೆ. ಪರಿಹಾರ ಕೊಡದೆ ಶವ ತೆಗೆದುಕೊಂಡು ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಸ್ಥಳಕ್ಕೆ ಬೆಳ್ಳೂರು ಪೊಲೀಸರು ಆಗಮಿಸಿದ್ದು ಈ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

ಹಿಂದಿನ ಲೇಖನಚಾಕೋಲೇಟ್ ಆಸೆ ತೋರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ 52 ವರ್ಷದ ಕಾಮುಕನ ಬಂಧನ
ಮುಂದಿನ ಲೇಖನಹುಣಸೂರು: ವಾಚ್ ಮೆನ್, ಬುದ್ದಿಮಾಂದ್ಯ ವ್ಯಕ್ತಿ ಕೊಲೆ