ಬರುತ್ತಿದೆ ಅಯೋಧ್ಯ ರಾಮನ "ಬಯೋ ಪಿಕ್"…
ವಿಶ್ವ ದಾಖಲೆ ನಿರ್ಮಿಸಿದ ಭಾರತೀಯ ಬಾಲಕಿ…
ವಿಮಾನದಲ್ಲಿ ನಮಾಜ್
ಬಿಡುಗಡೆಯಾಗಿದೆ, ಜಗತ್ತಿನ ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿ
ನಟಿ ಹರ್ಷಿಕ ಪೂರ್ಣಚ್ಚ ಹಾಗೂ ನಟ ಭುವನ್ ಮೇಲೆ ಹಲ್ಲೆ.
ಶಿಲ್ಪಾ ಶೆಟ್ಟಿ ರಾಜ್ ಕುಂದ್ರಾಗೆ ಎದುರಾಗಿದೆ ಸಂಕಷ್ಟ
ಮತದಾನದ ನಂತರ ಸಾವನಪ್ಪಿದ ವೃದ್ಧ….
ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ…
ಜೈ ಶ್ರೀ ರಾಮ್ ಎಂದು ಕೂಗಿದ್ದಕ್ಕೆ, ಮುಸ್ಲಿಂ ಯುವಕರಿಂದ ಹಲ್ಲೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಪಿರಿಯಾಪಟ್ಟಣ(Periyapattana) : ಗ್ರಾಮೀಣ ಭಾಗದ ಜನರು ಕೃಷಿ ಕೆಲಸಗಳ ಒತ್ತಡದ ನಡುವೆಯು ಆರೋಗ್ಯದ ಕಡೆಗೆ ಹೆಚ್ಚಿನ ಗಮನ ನೀಡಬೇಕು ಎಂದು ತಾಲ್ಲೂಕು ಮಾಹಿತಿ ಶಿಕ್ಷಣ ಸಂವಹನ ಸಂಯೋಜಕರಾದ ಡಿ.ರವಿಕುಮಾರ್ ಹೇಳಿದರು.
ತಾಲ್ಲೂಕಿನ ಕೋಮಲಾಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ನೇರಳೆಕುಪ್ಪೆ ಗ್ರಾಮದಲ್ಲಿ ಮ-ನರೇಗಾ ಯೋಜನೆಯ ಕೂಲಿ ಕಾರ್ಮಿಕರಿಗೆ ಗ್ರಾಮಪಂಚಾಯಿತಿ ವತಿಯಿಂದ ಆಯೋಜಿಸಿದ್ದಂತಹ “ಆರೋಗ್ಯ ತಪಾಸಣೆ ಹಾಗೂ ಇ-ಶ್ರಮ್ ನೋಂದಣಿ” ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗ್ರಾಮೀಣ ಭಾಗದ ಜನರು ಬಿಸಿಲು,ಮಳೆ ಎನ್ನದೇ, ನಿಗದಿತ ಸಮಯಕ್ಕೆ ಆಹಾರ ಸೇವಿಸದೇ ಕೃಷಿ ಚಟುವಟಿಕೆಗಳಲ್ಲಿ ಹೆಚ್ಚಿನದಾಗಿ ತೊಡಗಿಸಿಕೊಂಡು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಹೀಗಾಗಿಯು, ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಳ್ಳುವುದಕ್ಕೂ ಮುಂದಾಗುತ್ತಿಲ್ಲ. ಆರೋಗ್ಯದ ಬಗ್ಗೆ ಕಾಳಜಿಯಿಲ್ಲದಿರುವುದು ಇದಕ್ಕೆ ಕಾರಣವಾಗಿದೆ ಎಂದು ಬೇಸರವ್ಯಕ್ತಪಡಿಸಿದರು.
ಗ್ರಾ.ಪಂ ವತಿಯಿಂದ ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುವಂತಹ ಕೂಲಿ ಕಾರ್ಮಿಕರ ಆರೋಗ್ಯವನ್ನು ಕಾಪಾಡುವ ಉದ್ದೇಶದಿಂದ ಈ ರೀತಿಯಾಗಿ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಲಾಗಿದೆ. ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದೊತ್ತಡ, ಸಕ್ಕರೆ ಕಾಯಿಲೆ, ಹಿಮೋಗ್ಲೋಬಿನ್ ಹಾಗೂ ತೂಕ ಪರೀಕ್ಷೆಗಳನ್ನು ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಇ-ಶ್ರಮ್ ಯೋಜನೆಯಡಿ ೧೬ ರಿಂದ ೫೯ ವಯೋಮಿತಿಯ ಹಾಗೂ ಆದಾಯ ತೆರಿಗೆ ಪಾವತಿದಾರರಲ್ಲದವರು ನೋಂದಾಯಿಸಿಕೊಳ್ಳಬಹುದಾಗಿದೆ. ಇದರಿಂದ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಯೋಜನೆಗಳನ್ನು ಪಡೆದುಕೊಳ್ಳಬಹುದು. ಒಂದು ವರ್ಷದ ಅವಧಿಗೆ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ ಎಂದು ಮಾಹಿತಿ ನೀಡಿದರು.
ಆರೋಗ್ಯ ತಪಾಸಣೆ ಶಿಬಿರದಲ್ಲಿ ೨೬ಮಂದಿ ಪುರುಷರು ಹಾಗೂ ೨೪ ಮಂದಿ ಮಹಿಳೆಯರು ಸೇರಿದಂತೆ ೫೦ಕ್ಕೂ ಹೆಚ್ಚು ಮಂದಿ ಭಾಗವಹಿಸಿ ಚಿಕಿತ್ಸೆ ಪಡೆದುಕೊಂಡರು.
ಈ ಸಂದರ್ಭ ಆರೋಗ್ಯ ಅಮೃತ ಅಭಿಯಾನ ಸಂಯೋಜಕರಾದ ಜ್ಯೋತಿ, ಸಮುದಾಯ ಆರೋಗ್ಯ ಅಧಿಕಾರಿ ಸಂತೋಷ್ ಸೇರಿದಂತೆ ಇತರರು ಉಪಸ್ಥಿತರಿದ್ದರು.