ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಹೊಂದಿದ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ ಮಂಗಳವಾರದಿಂದ ಬುಧವಾರ ಬೆಳಗಿನ ಜಾವದವರೆಗೆ ಎಸ್ಐಟಿ ಅಧಿಕಾರಿಗಳು ನಗರದ ಹದಿನೆಂಟು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಎಸ್ಐಟಿ ಅಧಿಕಾರಿಗಳ ತಂಡ ಬುಧವಾರ ಬೆಳಗಿನ ಜಾವ 3.30 ರವರೆಗೂ ಶೋಧಕಾರ್ಯ ನಡೆಸಿದೆ. ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಆಪ್ತರಾದ ಕ್ವಾಲಿಟಿ ಬಾರ್ ಶರತ್, ಪುನೀತ್, ಎಚ್.ಪಿ.ಕಿರಣ್, ಕಾಂಗ್ರೆಸ್ ಕಾರ್ಯಕರ್ತರಾದ ಪುಟ್ಟರಾಜು, ನವೀನ್ಗೌಡ, ಪ್ರಜ್ವಲ್ ರೇವಣ್ಣ ಮಾಜಿ ಕಾರುಚಾಲಕ ಕಾರ್ತಿಕ್, ಶಶಿ, ಚೇತನ್ಗೌಡ ನಿವಾಸದ ಮೇಲೂ ಎಸ್ಐಟಿ ತಂಡಗಳು ಪ್ರತ್ಯೇಕವಾಗಿ ದಾಳಿ ನಡೆಸಿವೆ.
ಕ್ವಾಲಿಟಿ ಬಾರ್ ಶರತ್ ಅವರ ಬೆಂಗಳೂರಿನ ಗೋಪಾಲನಗರದ ಶೋಭಾ ಅಪಾರ್ಟ್ಮೆಂಟ್ನಲ್ಲಿರುವ ಫ್ಲಾಟ್ ಮೇಲೂ ದಾಳಿ ಮಾಡಿದ್ದ ಎಸ್ಐಟಿ ತಂಡ, ಶರತ್ ಅವರ ಐಫೋನ್ ವಶಕ್ಕೆ ಪಡೆದಿದ್ದು, ಅವರ ಮನೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಯುಕ್ತ ದಾಖಲಾತಿ, ಎಲೆಕ್ಟ್ರಾನಿಕ್ ವಸ್ತುಗಳು ದೊರಕಿಲ್ಲ ಎಂದು ಎಸ್ಐಟಿ ಶೋಧನಾ ಪಂಚನಾಮೆಯಲ್ಲಿ ಹೇಳಿದೆ.
ವಿವಿಧೆಡೆಯ ದಾಳಿಗಳಿಂದ ಎಸ್ಐಟಿ ತಂಡಗಳು ಮಹತ್ವದ ಸಾಕ್ಷ್ಯ ಹಾಗೂ ದಾಖಲೆಗಳನ್ನು ವಶಪಡಿಸಿಕೊಂಡು ಹೊರಟಿವೆ.
ಪೆನ್ ಡ್ರೈವ್ ಹಂಚಿಕೆ ಪ್ರಕರಣದ ಆರೋಪಿ ಕಾಂಗ್ರೆಸ್ ಕಾರ್ಯಕರ್ತ, ಸಚಿವ ಜಮೀರ್ ಅಹಮದ್ ಅವರ ಆಪ್ತ ನವೀನ್ಗೌಡ ನಿವಾಸದ ಮೇಲೂ ಎಸ್ಐಟಿ ದಾಳಿ ನಡೆಸಿದೆ.
ಬೇಲೂರಿನ ತಾಲ್ಲೂಕಿನ ನೆಲ್ಕೆ ಗ್ರಾಮದಲ್ಲಿರುವ ನವೀನ್ಗೌಡ ನಿವಾಸದ ಮೇಲೆ ಎಸ್ಐಟಿ ಅಧಿಕಾರಿಗಳಿಂದ ದಾಳಿ ನಡೆದಿದ್ದು, ಪೆನ್ಡ್ರೈವ್ ಹಂಚಿದ ಸಂಬಂಧ ಸಾಕ್ಷ್ಯ ಸಂಗ್ರಹಿಸಲಾಗುತ್ತಿದೆ.
ಪೆನ್ಡ್ರೈವ್ ಹಂಚಿಕೆ ಸಂಬಂಧ ಸೆನ್ ಪೊಲೀಸ್ ಠಾಣೆಯಲ್ಲಿ ನವೀನ್ಗೌಡ ವಿರುದ್ಧ ಪ್ರಕರಣ ದಾಖಲಾಗಿದ್ದು, ಈಗಾಗಲೇ ವಿಚಾರಣೆಗೆ ಹಾಜರಾಗಲು ಎಸ್ಐಟಿ ನೋಟಿಸ್ ನೀಡಿದೆ.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.