ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
ಸಿದ್ದರಾಮಯ್ಯ ಅವರಿಗೆ ಫ್ರೀ ಟಿಕೆಟ್ ಹಾರಾ ಅರ್ಪಣೆ…..
ಬಿರುಗಾಳಿಗೆ ಕುಸಿದು ಬಿದ್ದ ಮೊಬೈಲ್ ಟವರ್.
ನಿಜವಾಗಲೂ ಇತ್ತು ವಾಸುಕಿ ಸರ್ಪ….
ರಮ್ಯಾ ಔಟ್, ಐಶ್ವರ್ಯ ಎಂಟ್ರಿ…
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮೈಸೂರು(Mysuru): ಕರ್ನಾಟಕದ ಜನತೆ ಅನುಕಂಪ ತೋರಿಸಿದ್ದಾರೆ. ಕರ್ನಾಟಕ ಸರ್ಕಾರ, ಮುಖಂಡರು, ವಿರೋಧ ಪಕ್ಷದವರು, ಕಾರ್ಯಕರ್ತರು ಬಂದು ವಿಚಾರಿಸಿದ್ದಾರೆ. ಅವರಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಸಹೋದರ ಪ್ರಹ್ಲಾದ ದಾಮೋದರ ಮೋದಿ ತಿಳಿಸಿದ್ದಾರೆ.
ಇಲ್ಲಿನ ಕಡಕೊಳ ಬಳಿ ಮಂಗಳವಾರ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಪ್ರಹ್ಲಾದ ದಾಮೋದರ ಮೋದಿ ಅವರು ಚೇತರಿಸಿಕೊಂಡಿದ್ದು, ಇಂದು ಜೆಎಸ್ಎಸ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ಸಿ.ಪಿ.ಮಧು, ಶಾಸಕ ಎಸ್.ಎ.ರಾಮದಾಸ್ ಅವರೊಂದಿಗೆ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದರು.
ಈ ವೇಳೆ ಮಾತನಾಡಿದ ಅವರು, ನಾನು, ನಮ್ಮ ಕುಟುಂಬದವರು ಪ್ರಯಾಣ ಮಾಡುತ್ತಿದ್ದೆವು. ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆಯಿತು. ಯಾರಿಗೂ ತೊಂದರೆ ಆಗಲಿಲ್ಲ. ಕಮಾಂಡ್, ಪೊಲೀಸ್ ಸಿಬ್ಬಂದಿ ಜತೆಗೆ ಇದ್ದರು. ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದಿದ್ದೇವೆ ಎಂದರು.
ಎರಡು ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದೆವು. ಒಂದು ಕಾರಿನಲ್ಲಿ ನಾನು, ಮಗ, ಸೊಸೆ, ಮೊಮ್ಮಗ ಇದ್ದೆವು. ಮತ್ತೊಂದು ಕಾರಿನಲ್ಲಿ ಮಗಳು, ಅಳಿಯ ಮತ್ತು ಕುಟುಂಬದವರು ಇದ್ದರು. ಕಾರು ನನ್ನ ಸ್ನೇಹಿತ ರಾಜಶೇಖರ್ ಅವರದ್ದು. ಬೆಂಗಳೂರಿನಲ್ಲಿ ಕಾರು ಪಡೆದು ಕೊಂಡಿದ್ದೆವು. ಚಾಲಕನದ್ದೂ ಏನೂ ತಪ್ಪಿಲ್ಲ. ಎಸ್ಕಾರ್ಟ್ ಇದ್ದ ಕಾರಣ ಅತಿ ವೇಗದಲ್ಲಿ ಹೋಗಲು ಅವಕಾಶವೇ ಇರಲಿಲ್ಲ. ಅಚಾನಕ್ಕಾಗಿ ಅಪಘಾತವಾಗಿದೆ. ಸೀಟ್ ಬೆಲ್ಟ್ ಹಾಕಿದ್ದೆವು, ಏರ್ಬ್ಯಾಗ್ ಓಪನ್ ಆಗಿದ್ದರಿಂದ ತೊಂದರೆ ಆಗಲಿಲ್ಲ ಎಂದು ಮಾಹಿತಿ ನೀಡಿದರು.
ಪ್ರಧಾನಿ ಮೋದಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ಯಾರಿಗೂ ತೊಂದರೆ ಆಗಿಲ್ಲವೆಂದು ಹೇಳಿದ್ದೇನೆ. ಚಿಕಿತ್ಸೆ ಮುಗಿಸಿದ ಬಳಿಕ ಗುಜರಾತ್’ಗೆ ಹೋಗುತ್ತೇವೆ ಎಂದು ಪ್ರಹ್ಲಾದ್ ಮೋದಿ ಹೇಳಿದರು.