ಬೆಂಗಳೂರು: ರಾಜ್ಯ ಸರ್ಕಾರವು ಪ್ರಸಕ್ತ ಆರ್ಥಿಕ ವರ್ಷದಲ್ಲಿ ಜನವರಿ ಅಂತ್ಯದವರೆಗೆ ರಾಜಸ್ವ ಸಂಗ್ರಹಣೆಯಲ್ಲಿ ಶೇಕಡ 91ರಷ್ಟು ಗುರಿ ಸಾಧನೆ ಮಾಡಿದೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ತಿಳಿಸಿದರು.
ವಿಧಾನಮಂಡಲ ಅಧಿವೇಶನ ಶುಕ್ರವಾರದಿಂದ ಆರಂಭವಾಗಿದ್ದು, ವಿಧಾನಮಂಡಲದಲ್ಲಿ ಜಂಟಿ ಸದನವನ್ನುದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಿದರು.
ಸ್ವಂತ ತೆರಿಗೆ ರಾಜಸ್ವ ಸಂಗ್ರಹಣೆಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ 21ರಷ್ಟು ಹೆಚ್ಚಳವಾಗಿದೆ. ಬಜೆಟ್ ಅಂದಾಜಿನ ಶೇಕಡ 75ರಷ್ಟು ಮೊತ್ತವನ್ನು ಈವರೆಗೆ ವೆಚ್ಚ ಮಾಡಲಾಗಿದೆ ಎಂದರು.
ಸರ್ಕಾರವು ರೈತರು, ಕಾರ್ಮಿಕರು, ಬಡವರು, ದುರ್ಬಲ ವರ್ಗದವರು ಮತ್ತು ಅವಕಾಶ ವಂಚಿತರ ಕಲ್ಯಾಣ ಮತ್ತು ಅಭಿವೃದ್ಧಿಗೆ ಬದ್ಧವಾಗಿದ್ದು, ಅಭಿವೃದ್ಧಿ ಪಥದಲ್ಲಿ ಮುಂಚೂಣಿಯ ರಾಜ್ಯವಾಗಿ ದಾಪುಗಾಲಿಡುತ್ತಿದೆ ಎಂದು ಹೇಳಿದರು.
2022ರ ಜನವರಿ ಅಂತ್ಯಕ್ಕೆ ರಾಜ್ಯ ಸರ್ಕಾರದ ಬಂಡವಾಳ ವೆಚ್ಚವು 26,915 ಕೋಟಿಯಷ್ಟಿತ್ತು. 2023ರ ಜನವರಿ ಅಂತ್ಯಕ್ಮೆ ಬಂಡವಾಳ ವೆಚ್ಚದ ಪ್ರಮಾಣವು 33,991 ಕೋಟಿಯಷ್ಟಿದ್ದು, ಬಂಡವಾಳ ವೆಚ್ಚದಲ್ಲಿ ಗಣನೀಯ ಏರಿಕೆಯಾಗಿದೆ ಎಂದು ಶ್ಲಾಘಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಹೆಚ್ಚಿಸುವ ಐತಿಹಾಸಿಕ ಕ್ರಮವನ್ನು ಸರ್ಕಾರ ಕೈಗೊಂಡಿದೆ. ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ 15ರಿಂದ ಶೇ 17ಕ್ಕೆ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ 3ರಿಂದ ಶೇ 7ಕ್ಕೆ ಹೆಚ್ಚಿಸಲಾಗಿದೆ. ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆ ಅಡಿಯಲ್ಲಿ ಪ್ರಸಕ್ತ ಸಾಲಿನಲ್ಲಿ 29,000 ಕೋಟಿ ವೆಚ್ಚ ಮಾಡಲಾಗಿದೆ ಎಂದರು.
ಸುಲಲಿತ ವ್ಯವಹಾರದ ವಿಷಯದಲ್ಲಿ ಕರ್ನಾಟಕವು ದೇಶದಲ್ಲೇ ಅಗ್ರ ಸ್ಥಾನ ಪಡೆದಿದೆ. ಪ್ರಸಕ್ತ ಸಾಲಿನಲ್ಲಿ ದೇಶದ ರಫ್ತು ವಹಿವಾಟಿಗೆ ರಾಜ್ಯವು 25.87 ಬಿಲಿಯನ್ ಅಮೆರಿಕನ್ ಡಾಲರ್ ಗಳಷ್ಟು ಕೊಡುಗೆ ನೀಡಿದೆ. ಇದು ಈವರೆಗಿನ ಅತ್ಯಧಿಕ ಮೊತ್ತವಾಗಿದೆ ಎಂದು ತಿಳಿಸಿದರು.
ಅತ್ಯಾಚಾರ ಮತ್ತು ಪೋಕ್ಸೊ ಕಾಯ್ದೆಯಡಿ ದಾಖಲಾದ ಪ್ರಕರಣಗಳ ವಿಚಾರಣೆಗೆ 31 ತ್ವರಿತ ನ್ಯಾಯಾಲಯಗಳನ್ನು ಆರಂಭಿಸಲು ಮಂಜೂರಾತಿ ನೀಡಲಾಗಿದೆ. ಹೊಸ ಶಿಕ್ಷಣ ನೀತಿ ಅನುಷ್ಠಾನಕ್ಕೆ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
2022-23ನೇ ಸಾಲಿನಲ್ಲಿ 58,588 ದಶಲಕ್ಷ ಯೂನಿಟ್ ಉತ್ಪಾದಿಸಲಾಗಿದೆ. ಹೆಚ್ಚುವರಿಯಾಗಿ ಲಭ್ಯವಿದ್ದ 4,326.45 ದಶಲಕ್ಷ ಗ ಯೂನಿಟ್ ವಿದ್ಯುತ್ ಮಾರಾಟ ಮಾಡಿದ್ದು, 2,500 ಕೋಟಿ ಗಳಿಸಲಾಗಿದೆ ಎಂದು ವಿವರ ನೀಡಿದರು.
ಬೆಳಕು ಯೋಜನೆಯಡಿ 2.35 ಲಕ್ಷ ವಿದ್ಯುತ್ ರಹಿತ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಇದಕ್ಕಾಗಿ 124 ಕೋಟಿ ವ್ಯಯಿಸಲಾಗಿದೆ. ಪರಿಭಾವಿತ ಅರಣ್ಯ ಪ್ರದೇಶದ ವ್ಯಾಪ್ತಿಯಿಂದ 7.73 ಲಕ್ಷ ಹೆಕ್ಟೇರ್ ಪ್ರದೇಶವನ್ನು ಕೈಬಿಡಲಾಗಿದೆ ಎಂದರು.
ರಾಜ್ಯದ ಎಲ್ಲ ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ 9556 ಹೆಚ್ಚುವರಿ ಶಾಲಾ ಕೊಠಡಿ ಹಾಗೂ ಶೌಚಾಲಯ ನಿರ್ಮಾಣಕ್ಕೆ 1923.5 ಕೋಟಿ ಅನುದಾನ ನೀಡಲಾಗಿದೆ. ಬೀದರ್, ಹಾವೇರಿ, ಚಾಮರಾಜನಗರ, ಕೊಡಗು, ಕೊಪ್ಪಳ, ಹಾಸನದಲ್ಲಿ 7 ವಿವಿ ಸ್ಥಾಪನೆ ಹಾಗೂ 7 ಇಂಜಿನಿಯರಿಂಗ್ ಕಾಲೇಜುಗಳನ್ನು ಐಐಟಿ ಮಾದರಿಯಲ್ಲಿ ಮೇಲ್ದರ್ಜೆಗೆ ಕ್ರಮ ಕೈಗೊಳ್ಳಲಾಗಿದೆ. ಒಟ್ಟು 106314 ವಿದ್ಯಾರ್ಥಿನಿಯರಿಗೆ ಓಬವ್ವ ಆತ್ನ ರಕ್ಷಣಾ ಕಲೆ ಅಡಿಯಲ್ಲಿ ಆತ್ಮ ರಕ್ಷಣಾ ತರಬೇತಿ ನೀಡಲಾಗುತ್ತಿದೆ ಎಂದರು.
ವಿಶ್ವ ದಾಖಲೆ ನಿರ್ಮಿಸಿದ ಭಾರತೀಯ ಬಾಲಕಿ…
ವಿಮಾನದಲ್ಲಿ ನಮಾಜ್
ಬಿಡುಗಡೆಯಾಗಿದೆ, ಜಗತ್ತಿನ ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿ
ನಟಿ ಹರ್ಷಿಕ ಪೂರ್ಣಚ್ಚ ಹಾಗೂ ನಟ ಭುವನ್ ಮೇಲೆ ಹಲ್ಲೆ.
ಶಿಲ್ಪಾ ಶೆಟ್ಟಿ ರಾಜ್ ಕುಂದ್ರಾಗೆ ಎದುರಾಗಿದೆ ಸಂಕಷ್ಟ
ಮತದಾನದ ನಂತರ ಸಾವನಪ್ಪಿದ ವೃದ್ಧ….
ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ…
ಜೈ ಶ್ರೀ ರಾಮ್ ಎಂದು ಕೂಗಿದ್ದಕ್ಕೆ, ಮುಸ್ಲಿಂ ಯುವಕರಿಂದ ಹಲ್ಲೆ
ಖ್ಯಾತ ಯೂಟ್ಯೂಬರ್ ಅಭ್ರಾದೀಪ್ ಸಹ ಇನ್ನಿಲ್ಲ..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.