ಬೆಂಗಳೂರು: ಕರ್ನಾಟಕ ಹೈಕೋರ್ಟ್ನ ಹೊಸ ನ್ಯಾಯಮೂರ್ತಿಯಾಗಿ ಪೆರುಗು ಸುಧಾ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ರಾಜ್ಯದ ನ್ಯಾಯಾಂಗ ವ್ಯವಸ್ಥೆಗೆ ಮತ್ತೊಂದು ಪ್ರಮುಖ ಅಧಿಕಾರಿಯು ಸೇರ್ಪಡೆಯಾಗಿದ್ದಾರೆ.
ರಾಜಭವನದ ಬ್ಯಾಂಕ್ವಟ್ ಸಭಾಂಗಣದಲ್ಲಿ ನಡೆದ ಸರಳ ಮತ್ತು ಘನ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನ್ಯಾಯಮೂರ್ತಿ ಪೆರುಗು ಸುಧಾಗೆ ಪ್ರಮಾಣ ವಚನ ಬೋಧಿಸಿದರು. ಈ ವೇಳೆ ರಾಜ್ಯದ ಪ್ರಮುಖ ನಾಯಕರೂ ಸೇರಿದಂತೆ ಹಲವಾರು ಗಣ್ಯರು ಹಾಜರಿದ್ದರು.
ಪ್ರಮಾಣ ವಚನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ಉಚ್ಚ ನ್ಯಾಯಾಲಯದ ಹಂಗಾಮಿ ಮುಖ್ಯ ನ್ಯಾಯಾಧೀಶ ವಿ. ಕಾಮೇಶ್ವರ ರಾವ್, ಇಂಧನ ಸಚಿವ ಕೆ.ಜೆ. ಜಾರ್ಜ್, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಸತ್ಯವತಿ ಜಿ., ಹೈಕೋರ್ಟ್ನ ಇತರ ನ್ಯಾಯಮೂರ್ತಿಗಳು, ಹಿರಿಯ ವಕೀಲರು ಸೇರಿದಂತೆ ಗಣ್ಯರು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.














