ಮನೆ ರಾಜ್ಯ ಮತಾಂತರ ಕಾಯ್ದೆ ಪ್ರಶ್ನಿಸಿ ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್‌  ನೋಟಿಸ್‌

ಮತಾಂತರ ಕಾಯ್ದೆ ಪ್ರಶ್ನಿಸಿ ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್‌  ನೋಟಿಸ್‌

0

ಬೆಂಗಳೂರು (Bengaluru): ಬಲವಂತದ ಮತಾಂತರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲಾಗಿರುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆ ಪ್ರಶ್ನಿಸಿದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಸಂಬಂಧ ದೆಹಲಿಯ, ʻಇವಾನಲಿಕಲ್ ಫೆಲೋಶಿಪ್ ಆಫ್ ಇಂಡಿಯಾ’ ಮತ್ತು ‘ಆಲ್ ಕರ್ನಾಟಕ ಯುನೈಟೆಡ್ ಕ್ರಿಶ್ಚಿಯನ್ ಫೋರಂ ಫಾರ್ ಹ್ಯುಮನ್ ರೈಟ್ಸ್ ಸಂಸ್ಥೆ’ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು. ಅರ್ಜಿಗೆ ನಾಲ್ಕು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.

‘ಈ ಕಾಯ್ದೆಯು, ಧಾರ್ಮಿಕ ಸ್ವಾತಂತ್ರ್ಯವನ್ನು ಖಾತ್ರಿಪಡಿಸುವ ಸಂವಿಧಾನದ 25ನೇ ವಿಧಿ ಮತ್ತು ಜಾತ್ಯತೀತ ತತ್ವಗಳಿಗೆ ವಿರುದ್ಧವಾಗಿದೆ’ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.

ಅರ್ಜಿದಾರರ ಪರ ಹಿರಿಯ ವಕೀಲ ಆದಿತ್ಯ ಸೋಂಧಿ ಹಾಗೂ ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ ವಾದ ಮಂಡಿಸಿದರು.

‘2022ರ ಮೇ 17ರಿಂದ ಜಾರಿಗೆ ಬಂದಿರುವ ಸುಗ್ರೀವಾಜ್ಞೆ ಅಡಿಯಲ್ಲಿ ಯಾರ ವಿರುದ್ಧವೂ ಕ್ರಮ ಕೈಗೊಳ್ಳದಂತೆ ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಮಧ್ಯಂತರ ಮನವಿ ಮಾಡಿದ್ದಾರೆ.

ಹಿಂದಿನ ಲೇಖನಬಿಎಸ್ವೈ ಅವರು ನಿವೃತ್ತಿ ಪಡೆಯುವ ಪ್ರಶ್ನೆಯೇ ಇಲ್ಲ: ಸಿಎಂ ಬೊಮ್ಮಾಯಿ
ಮುಂದಿನ ಲೇಖನಬೆಂಗಳೂರಿನ ಜವಾಹರ್ಲಾಲ್ ನೆಹರು ಸಂಶೋಧನಾ ಸಂಸ್ಥೆಯಲ್ಲಿ ಕೆಲಸ ಖಾಲಿ ಇದೆ: ಇಂದೇ ಅರ್ಜಿ ಸಲ್ಲಿಸಿ