ಬೆಂಗಳೂರು(Bengaluru): ಕೇಂದ್ರ ಸರ್ಕಾರದ ಸಾರಿಗೆ ಇಲಾಖೆ ಬೆಂಗಳೂರು ಮತ್ತು ಮುಂಬೈ ನಡುವೆ ಎಕ್ಸ್ಪ್ರೆಸ್ವೇ ನಿರ್ಮಿಸಲು ಯೋಜನೆ ರೂಪಿಸುತ್ತಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಇದು ಎರಡು ನಗರಗಳ ನಡುವಿನ ಪ್ರಯಾಣದ ಸಮಯವನ್ನು ಐದು ಗಂಟೆಗಳಷ್ಟು ಕಡಿಮೆ ಮಾಡಲಿದೆ. ಜೊತೆಗೆ ಈ ಎಕ್ಸ್ಪ್ರೆಸ್ವೇ ಮುಂಬೈ ಪುಣೆ ಎಕ್ಸ್ಪ್ರೆಸ್ ವೇಗದಲ್ಲಿ ಸಂಪರ್ಕ ಕಲ್ಪಿಸಲಿದೆ ಎಂದು ಹೇಳಿದ್ದಾರೆ.
ಮುಂಬೈ ಮತ್ತು ಬೆಂಗಳೂರು ನಡುವೆ ಹಸಿರು ಎಕ್ಸ್’ಪ್ರೆಸ್ ಹೆದ್ದಾರಿಯನ್ನು ಯೋಜಿಸುತ್ತಿದ್ದೇವೆ. ಇದು ಟೆಕ್ ರಾಜಧಾನಿ ಮತ್ತು ವಾಣಿಜ್ಯ ರಾಜಧಾನಿ ನಡುವಿನ ಪ್ರಯಾಣವನ್ನು ಐದು ಗಂಟೆಗೆ ಇಳಿಸಲಿದೆ. ಇದರಿಂದ ಬೆಂಗಳೂರು ಮತ್ತು ಪುಣೆ ನಡುವಿನ ಪ್ರಯಾಣದ ಸಮಯವು 3.50 ರಿಂದ 4 ಗಂಟೆಗಳವರೆಗೆ ಕಡಿಮೆಯಾಗುತ್ತದೆ ಎಂದು ಅವರು ಹೇಳಿದ್ದಾರೆ.