ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಕೇಂದ್ರ ಸರ್ಕಾರ ರಚಿಸಿರುವ ನೂತನ ವಿಚಾರಣಾ ಆಯೋಗದ ವರದಿ ಸಲ್ಲಿಕೆಯಾಗುವವರೆಗೆ ಕ್ರೈಸ್ತ ಮತ್ತು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ದಲಿತರಿಗೆ ಪರಿಶಿಷ್ಟ ಜಾತಿಯ ಪ್ರಯೋಜನಗಳನ್ನು ವಿಸ್ತರಿಸಬೇಕೇ ಎಂಬುದರ ಕುರಿತು ತೀರ್ಪು ನೀಡುವುದನ್ನು ತಡೆ ಹಿಡಿಯಬೇಕೆ ಎಂಬ ಬಗ್ಗೆ ಸುಪ್ರೀಂ ಕೋರ್ಟ್ ಬುಧವಾರ ಚಿಂತನೆ ನಡೆಸಿತು.
[ಸಿಪಿಐಎಲ್ ಮತ್ತು ಭಾರತ ಒಕ್ಕೂಟ ನಡುವಣ ಪ್ರಕರಣ].
ಇಸ್ಲಾಂ ಮತ್ತು ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳುವ ದಲಿತ ವ್ಯಕ್ತಿಗಳಿಗೂ ಸಹ ಮೀಸಲಾತಿ ಪ್ರಯೋಜನಗಳನ್ನು ವಿಸ್ತರಿಸಲು ಕೋರಿ 2004ರಲ್ಲಿ ಸೆಂಟರ್ ಫಾರ್ ಪಬ್ಲಿಕ್ ಇಂಟರೆಸ್ಟ್ ಲಿಟಿಗೇಷನ್ (ಸಿಪಿಐಎಲ್) ಸಲ್ಲಿಸಿದ್ದ ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಎಸ್ ಕೆ ಕೌಲ್, ಅಭಯ್ ಎಸ್ ಓಕಾ ಮತ್ತು ವಿಕ್ರಮ್ ನಾಥ್ ಅವರಿದ್ದ ಪೀಠ ನಡೆಸಿತು.
ಈಗ ಪ್ರಶ್ನಿಸಲಾಗಿರುವ ನ್ಯಾ. ರಂಗನಾಥ್ ಮಿಶ್ರಾ ಆಯೋಗದ ವರದಿ ದಲಿತ ಹಿಂದೂಗಳಂತೆಯೇ ಇತರ ಧರ್ಮದಲ್ಲಿಯೂ ದಲಿತರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಹೇಳಿತ್ತು ಎಂಬುದಾಗಿ ಮನವಿಯಲ್ಲಿ ವಿವರಿಸಲಾಗಿತ್ತು.
ಬುಧವಾರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ “ಕೇಂದ್ರ ಸರ್ಕಾರ ಆಯೋಗದ ವರದಿ ಅಂಗೀಕರಿಸದಿರಲು ನಿರ್ಧರಿಸಿದ್ದು ಅದರ ಬದಲು ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಕೆ ಜಿ ಬಾಲಕೃಷ್ಣನ್ ನೇತೃತ್ವದಲ್ಲಿ ಹೊಸ ಆಯೋಗ ರಚಿಸಿದೆ” ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ಆದರೆ ಸಿಪಿಐಎಲ್ ಪರ ಹಾಜರಾದ ವಕೀಲ ಪ್ರಶಾಂತ್ ಭೂಷಣ್, ಹೊಸ ಆಯೋಗದ ವಿಚಾರಣೆ ಮುಗಿಯುವ ಹೊತ್ತಿಗೆ 18 ವರ್ಷಗಳಷ್ಟು ಹಳೆಯ ಪ್ರಕರಣ ಇನ್ನಷ್ಟು ವಿಳಂಬವಾಗುತ್ತದೆ. ವರದಿ ಬರಲು ಇನ್ನೂ ಎರಡು ವರ್ಷಗಳಷ್ಟು ಅವಧಿ ಹಿಡಿಯಬಹುದು ಎಂದರು.
ಅರ್ಜಿಯ ವಿಚಾರಣಾರ್ಹತೆ ನಿರ್ಧರಿಸುವುದಕ್ಕೂ ಮೊದಲು, ಜನವರಿ 2023ರಲ್ಲಿ ನಿಗದಿಯಾಗಿರುವ ಮುಂದಿನ ವಿಚಾರಣೆ ಸಂದರ್ಭದಲ್ಲಿ ಪ್ರಸ್ತುತ ಸಲ್ಲಿಕೆಯಾಗಿರುವ ದಾಖಲೆಗಳಿಂದ ಮಾತ್ರವೇ ಮನವಿಯನ್ನು ಪರಿಗಣಿಸಬಹುದೇ ಎಂಬ ಬಗ್ಗೆ ತೀರ್ಮಾನಿಸುವುದಾಗಿ ಪೀಠ ನುಡಿಯಿತು.
ಈ ಹಿಂದೆ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಸುಪ್ರೀಂ ಕೋರ್ಟ್ ಪ್ರತಿಕ್ರಿಯೆ ಕೋರಿತ್ತು, ಅದರಂತೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಸಿಪಿಐಎಲ್ ಮನವಿಯನ್ನು ವಿರೋಧಿಸಿ ಅಫಿಡವಿಟ್ ಸಲ್ಲಿಸಿತ್ತು.
ಹಿಂದೂ ಸಮಾಜದಲ್ಲಿ ನೂರಾರು ವರ್ಷಗಳಿಂದ ಇದ್ದ ದಬ್ಬಾಳಿಕೆಯ ವಾತಾವರಣ ಕ್ರೈಸ್ತ ಅಥವಾ ಮುಸ್ಲಿಂ ಧರ್ಮದಲ್ಲಿಯೂ ಅಸ್ತಿತ್ವದಲ್ಲಿದೆ ಎನ್ನುವುದಕ್ಕೆ ಯಾವುದೇ ಅಧಿಕೃತ ದಾಖಲೆ ಇಲ್ಲ ಎಂದು ಅಫಿಡವಿಟ್ ಹೇಳಿತ್ತು.