ಮನೆ ರಾಜಕೀಯ ಪ್ರಧಾನಿ ಮೋದಿ ಕರ್ನಾಟಕ ಪ್ರವಾಸ ರದ್ದು

ಪ್ರಧಾನಿ ಮೋದಿ ಕರ್ನಾಟಕ ಪ್ರವಾಸ ರದ್ದು

0

ಬೆಂಗಳೂರುಪ್ರಧಾನಿ ನರೇಂದ್ರ ಮೋದಿ ಅವರ ಏಪ್ರಿಲ್ 5ರ ಕರ್ನಾಟಕ ಪ್ರವಾಸ ದಿಢೀರ್ ರದ್ದುಗೊಂಡಿದೆ. 

ನರೇಂದ್ರ ಮೋದಿ ಅವರು ಏಪ್ರಿಲ್ 5ರಂದು ಬೆಂಗಳೂರಿಗೆ ಆಗಮಿಸಬೇಕಿತ್ತು. ಆದರೆ ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಗೆ ಕೋವಿಡ್ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಮೋದಿ ಅವರ ರಾಜ್ಯ ಪ್ರವಾಸ ರದ್ದು ಮಾಡಲಾಗಿದೆ. 

ಏಪ್ರಿಲ್ 5ರಂದು ಮೂರು ಕಾರ್ಯಕ್ರಮಗಳ ಉದ್ಘಾಟನೆಗಾಗಿ ಪ್ರಧಾನಿ ಮೋದಿ ಅವರು ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಜೊತೆ ಕರ್ನಾಟಕ್ಕೆ ಆಗಮಿಸಬೇಕಿತ್ತು. ಆದರೆ ನಫ್ತಾಲಿಗೆ ಕೊರೋನಾ ಕಾಣಿಸಿಕೊಂಡಿದ್ದರಿಂದ ಅವರನ್ನು ಕ್ವಾರಂಟೈನ್ ಮಾಡಲಾಗಿದೆ. ಹೀಗಾಗಿ ಅವರ ಭಾರತ ಪ್ರವಾಸ ರದ್ದುಗೊಂಡಿತ್ತು. 

ಪ್ರಧಾನಿ ಮೋದಿ ಅವರು ರಾಜ್ಯದಲ್ಲಿ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಲೋಕಾರ್ಪಣೆ, ಮೇಲ್ದರ್ಜೆಗೇರಿಸಿದ 150 ಐಟಿಐ ಉದ್ಘಾಟನೆ ಕಾರ್ಯಕ್ರಮ, ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಬೇಕಿತ್ತು. 

ಹಿಂದಿನ ಲೇಖನಪತಿ ವಿರುದ್ಧ ಪತ್ನಿಯ ಆಧಾರ ರಹಿತ ಆರೋಪ ವಿಚ್ಛೇದನಕ್ಕೆ ಅರ್ಹ: ದೆಹಲಿ ಹೈಕೋರ್ಟ್
ಮುಂದಿನ ಲೇಖನಕುಸಿದ ತಾರಸಿ: ಮಹಿಳೆ ಸಾವು 40ಕ್ಕೂ ಹೆಚ್ಚು ಮಂದಿಗೆ ಗಾಯ