ಮನೆ ರಾಷ್ಟ್ರೀಯ ರಸ್ತೆಯಲ್ಲಿ ಮಹಿಳಾ ಕುಸ್ತಿಪಟುಗಳನ್ನು ಎಳೆದೊಯ್ದ ಪೊಲೀಸರು: ಪ್ರಜಾಪ್ರಭುತ್ವವನ್ನು ಕೊಲೆ ಮಾಡಲಾಗುತ್ತಿದೆ ಎಂದ ಸಾಕ್ಷಿ ಮಲಿಕ್

ರಸ್ತೆಯಲ್ಲಿ ಮಹಿಳಾ ಕುಸ್ತಿಪಟುಗಳನ್ನು ಎಳೆದೊಯ್ದ ಪೊಲೀಸರು: ಪ್ರಜಾಪ್ರಭುತ್ವವನ್ನು ಕೊಲೆ ಮಾಡಲಾಗುತ್ತಿದೆ ಎಂದ ಸಾಕ್ಷಿ ಮಲಿಕ್

0

ಭಾರತದ ಕುಸ್ತಿ ಫೆಡರೇಷನ್​ ಮುಖ್ಯಸ್ಥ ಬ್ರಿಜ್​ ಭೂಷಣ್​ ಸಿಂಗ್ ಬಂಧನಕ್ಕೆ ಒತ್ತಾಯಿಸಿ ಕುಸ್ತಿಪಟುಗಳು ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ಹೊಸದಾಗಿ ನಿರ್ಮಿಸಲಾದ ಸಂಸತ್​ ಭವನದ ಕಡೆ ಮೆರವಣಿಗೆಗೆ ಯತ್ನಿಸಿದ ಕುಸ್ತಿಪಟುಗಳನ್ನು ಪೊಲೀಸರು ಭಾನುವಾರ ಬಂಧಿಸಿದರು.

Join Our Whatsapp Group

ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಹಾಗೂ ಸಾಕ್ಷಿ ಮಲಿಕ್ ಸೇರಿದಂತೆ ಭಾರತದ ಹಲವು ಪ್ರಮುಖ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

ಮೋದಿಯವರು ಭಾರತದ ನೂತನ ಸಂಸತ್ ಭವನವನ್ನು ಉದ್ಘಾಟಿಸುತ್ತಿದ್ದಂತೆಯೇ ಕುಸ್ತಿಪಟುಗಳು ಅದನ್ನು ಮೆರವಣಿಗೆ ಮಾಡಲು ಪ್ರಯತ್ನಿಸಿದರು, ಆದರೆ ನೂರಾರು ಪೊಲೀಸ್ ಅಧಿಕಾರಿಗಳು ಅವರನ್ನು ತಡೆದು, ಸಾಕ್ಷಿ ಮಲಿಕ್ ಹಾಗೂ ಪುನಿಯಾರನ್ನು ಪೊಲೀಸರು ಎಳೆದೊಯ್ದಿದ್ದಾರೆ.

ಒಂದೆಡೆ ಸಂಸತ್ತು ಉದ್ಘಾಟನೆಯಾಗುತ್ತಿದೆ, ಮತ್ತೊಂದೆಡೆ ಪ್ರಜಾಪ್ರಭುತ್ವವನ್ನು ಕೊಲೆ ಮಾಡಲಾಗುತ್ತಿದೆ ಎಂದು ಸಾಕ್ಷಿ ಮಲಿಕ್ ಹೇಳಿದ್ದಾರೆ.

ಮಹಿಳೆಯರ 58 ಕೆಜಿ ಫ್ರೀಸ್ಟೈಲ್ ಸ್ಪರ್ಧೆಯಲ್ಲಿ ಪದಕ ಗೆದ್ದಿರುವ ಮಲಿಕ್, ಕುಸ್ತಿಪಟುಗಳನ್ನು ಪೊಲೀಸರು ಎಳೆದೊಯ್ದ ಫೋಟೋಗಳು ಮತ್ತು ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಹೆಚ್ಚಿನ ಕುಸ್ತಿಪಟುಗಳು ಹಳ್ಳಿಗಳಿಂದ ಬಂದಿದ್ದಾರೆ, ಭ್ರೂಣಹತ್ಯೆ ನಡೆಯುತ್ತಿರುವ ಹಳ್ಳಿಗಳಲ್ಲಿ ಹೆಣ್ಣುಮಕ್ಕಳನ್ನು ಉಳಿಸಿಕೊಳ್ಳಲು, ಅವರನ್ನು ಮನೆಯಿಂದ ಹೊರಗೆ ಕಳುಹಿಸಲು ತುಂಬಾ ಹೋರಾಟ ಮಾಡಬೇಕಾಗುತ್ತದೆ, ಆದರೆ ಇಂತಹ ಸಂದರ್ಭದಲ್ಲಿ ಈ ರೀತಿ ಕಿರುಕುಳ, ದೌರ್ಜನ್ಯಗಳು ನಡೆದಾಗ ಹೆಣ್ಣುಮಕ್ಕಳನ್ನು ಪೋಷಕರು ಮನೆಯಿಂದ ಕಳುಹಿಸಲು ಧೈರ್ಯ ಮಾಡುವುದೇ ಇಲ್ಲ ಎಂದು ಅಥ್ಲೀಟ್​ಗಳು ಹೇಳಿದ್ದಾರೆ.

ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಸೇರಿದಂತೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಕುಸ್ತಿಪಟುಗಳ  ವಿರುದ್ಧ ಎಫ್ ​ಐಆರ್ ದಾಖಲಾಗಿದೆ.

ಹಿಂದಿನ ಲೇಖನಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೆ ಮುಂಗಾರು ಪ್ರವೇಶ
ಮುಂದಿನ ಲೇಖನಆರೋಗ್ಯ ಲಾಭಕ್ಕಾಗಿ ರೇನ್ ಬೋ ಡಯಟ್‌  ಅನುಸರಿಸಿ