ಮೈಸೂರು: ಪ್ರಚಾರದ ವೇಳೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ರಾಜಕೀಯ ಪಕ್ಷಗಳು ಹಾಗೂ ಪ್ರತಿನಿಧಿಗಳು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಕೆ.ವಿ ರಾಜೇಂದ್ರ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ರಾಜಕೀಯ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರಾಜಕೀಯ ನಾಯಕರು ದೇಣಿಗೆ ಪಡೆಯುವ ಸಂದರ್ಭದಲ್ಲಿ ಸಂಗ್ರಹವಾಗುವ ಹಾಗೂ ನೇರವಾಗಿ ಹಣ ಪಡೆಯುವ ಬಗ್ಗೆ ಪತ್ರಿಕೆಗಳಲ್ಲಿ ವರದಿಗಳು ಬರುತ್ತಿದೆ. ಇದು ನೀತಿ ಸಂಹಿತೆಯ ಉಲ್ಲಂಘನೆಯಾಗುತ್ತದೆ. ದೇವಸ್ಧಾನ ಒಳಗೆ ಪೂಜಾ ತಟ್ಟೆಗೆ ದುಡ್ಡು ಹಾಕಿದರೂ ಉಲ್ಲಂಘನೆಯಾಗುತ್ತದೆ. ಅದರ ಬದಲು ಹುಂಡಿಗೆ ಹಾಕಬಹುದು ಎಂದರು.
ರಾಜಕೀಯ ರಾಲಿ, ಸಮಾರಂಭ ಹಾಗೂ ವಾಹನ ಬಳಸಲು ಕಡ್ಡಾಯವಾಗಿ ಅನುಮತಿ ಪಡೆದಿರಬೇಕು. ಒಬ್ಬ ಅಭ್ಯರ್ಥಿಯು 40 ಲಕ್ಷ ಖರ್ಚು ಮಾಡಲು ಅವಕಾಶವಿದೆ. ಪ್ರಚಾರದ ಪ್ರತಿಯೊಂದು ಖರ್ಚನ್ನು ಲೆಕ್ಕ ಇಡಬೇಕು. ಆನ್ ಲೈನ್ ಮೂಲಕವು ನಾಮ ಪತ್ರ ಸಲ್ಲಿಸಬಹುದಾಗಿದೆ. ಸ್ಟಾರ್ ಕ್ಯಾಪೈನರ್ ಪ್ರಚಾರ ಮಾಡುವಾಗ ಅಭ್ಯರ್ಥಿ ವೇದಿಕೆಯ ಮೇಲೆ ಇದ್ದರೆ ಅಥವಾ ಬ್ಯಾನರ್ ನಲ್ಲಿ ಅಭ್ಯರ್ಥಿಯ ಭಾವಚಿತ್ರ ಇದ್ದಾರೆ ವೆಚ್ಚ ಅಭ್ಯರ್ಥಿಯ ಲೆಕ್ಕಕ್ಕೆ ಹಾಕಲಾಗುತ್ತದೆ. ಕರ ಪತ್ರಗಳ ಮುದ್ರಣದಲ್ಲಿ ಮುದ್ರಣಗಳ ಸಂಖ್ಯೆ ಹಾಗೂ ಮುದ್ರಣದ ವಿಳಾಸ ಕಡ್ಡಾಯವಾಗಿ ಮುದ್ರಿಸಿರಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಮಹಾನಗರ ಪಾಲಿಕೆಯ ಆಯುಕ್ತರಾದ ಲಕ್ಷ್ಮೀಕಾಂತರೆಡ್ಡಿ , ಚುನಾವಣಾ ತಹಶೀಲ್ದಾರ್ ರಾಮಪ್ರಸಾದ್, ಸೇರಿದಂತೆ ವಿವಿಧ ಪಕ್ಷಗಳ ರಾಜಕೀಯ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.