ದೇವನಹಳ್ಳಿ(Devanahalli): ರಾಜಕಾರಣವನ್ನು ಫೀಲ್ಡ್ನಲ್ಲಿ ಮಾಡಬೇಕೇ ಹೊರತು, ತನಿಖಾ ಸಂಸ್ಥೆಯ ಕಚೇರಿಯಲ್ಲಿ ಅಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.
ಯಂಗ್ ಇಂಡಿಯಾ ಸಂಸ್ಥೆಗೆ ದೇಣಿಗೆ ಹಣ ಕೊಟ್ಟಿರುವ ಬಗ್ಗೆ ಇಡಿ ವಿಚಾರಣೆಗಾಗಿ ದೆಹಲಿಗೆ ತೆರಳಿದ್ದ ಡಿ ಕೆ ಶಿವಕುಮಾರ್ ರಾತ್ರಿ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದರು.
ನಮ್ಮ ಆದಿಚುಂಚನಗಿರಿ ಮಠಕ್ಕೆ ರಾಹುಲ್ ಗಾಂಧಿಯವರ ಭಾರತ್ ಜೋಡೋ ಪಾದಯಾತ್ರೆ ಬಂದಿದೆ. ರಾಹುಲ್ ಗಾಂಧಿ ಅವರು ನಮ್ಮ ಭಾಗದಲ್ಲಿ ಹೆಜ್ಜೆ ಹಾಕುತ್ತಿದ್ದಾರೆ. ಪಕ್ಷದ ರಾಜ್ಯ ಅಧ್ಯಕ್ಷನಾಗಿದ್ದರೂ ನಾನು ಇವತ್ತು ಯಾತ್ರೆಯಲ್ಲಿ ಭಾಗವಹಿಸಲು ಆಗಿಲ್ಲ. ಈಗ್ಲೇ ಈ ವಿಚಾರಣೆ ಮಾಡುವ ಅಗತ್ಯ ಏನಿತ್ತು?, ನಾನು ಅ. 23 ರ ನಂತರ ಯಾವುದೇ ದಿನ ವಿಚಾರಣೆಗೆ ಕರೆದರೂ ಬರುತ್ತೇನೆ ಎಂದು ಸಮಯ ಕೇಳಿದ್ದರೂ ಅವಕಾಶ ನೀಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಇಡಿ ವಿಚಾರಣೆ ಒಂದು ಹಂತಕ್ಕೆ ಮುಕ್ತಾಯವಾಗಿದೆ. ಎರಡು ಮೂರು ದಿನಗಳಲ್ಲಿ ಕೆಲವು ದಾಖಲೆ ನೀಡುವಂತೆ ಕೇಳಿದ್ದಾರೆ. ನಾನು ಸಮಯಾವಕಾಶ ಕೋರಿದ್ದೇನೆ ಎಂದರು.
ಯಂಗ್ ಇಂಡಿಯಾ ಸಂಸ್ಥೆಗೆ ಹಣ ನೀಡಿರುವ ಬಗ್ಗೆ ಅವರು ಮಾಹಿತಿ ಕೇಳಿದರು. ಜವಾಹರಲಾಲ್ ನೆಹರು ಹಾಗೂ ಗಾಂಧಿ ಅವರ ಕಾಲದಲ್ಲಿ ನಮ್ಮ ಮುಖಂಡರು ಮಾಡಿರುವ ಸಂಸ್ಥೆಗಳಿಗೆ ಈಗ ನಾವು ಹಣ ನೀಡಿದ್ದೇವೆ ಎಂದು ಹೇಳಿದ್ದೇವೆ. ಅವರು ನೀವು ಹಣ ಯಾಕೆ ಕೊಟ್ಟಿರಿ?, ಹೇಗೆ ಕೊಟ್ಟಿರಿ? ಅದರ ಮೂಲ ಏನು ಎಂದು ಕೇಳಿದ್ದಾರೆ ಎಂದು ತಿಳಿಸಿದರು.
ಮತದಾನದ ನಂತರ ಸಾವನಪ್ಪಿದ ವೃದ್ಧ….
ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ…
ಜೈ ಶ್ರೀ ರಾಮ್ ಎಂದು ಕೂಗಿದ್ದಕ್ಕೆ, ಮುಸ್ಲಿಂ ಯುವಕರಿಂದ ಹಲ್ಲೆ
ಖ್ಯಾತ ಯೂಟ್ಯೂಬರ್ ಅಭ್ರಾದೀಪ್ ಸಹ ಇನ್ನಿಲ್ಲ..
ದುಬೈನಲ್ಲಿ ಧಾರಾಕಾರ ಮಳೆ
ಆನ್ಲೈನ್ನಲ್ಲಿ ರಾಮ್ ಲಲ್ಲಾ ತಿಲಕ ಸಮಾರಂಭವನ್ನು ವೀಕ್ಷಿಸಿದ ಪ್ರಧಾನಿ ಮೋದಿ
ದೇಶದಲ್ಲಿ ಸಂಚಲನ ಶುರುವಾಗುತ್ತಾ….?
ರಾಮ್ ಲಲ್ಲಾನ ಹಣೆ ಸ್ಪರ್ಶಿಸಿದ ಸೂರ್ಯರಶ್ಮಿ
ಆಪಲ್ ಬಳಕೆದಾರರಿಗೆ ಬಿಗ್ ಶಾಕ್…. !
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.