ಹೈದರಾಬಾದ್: ತೆಲುಗಿನ ಜನಪ್ರಿಯ ನೃತ್ಯ ನಿರ್ದೇಶಕ (ಕೊರಿಯೊಗ್ರಾಫರ್) ಚೈತನ್ಯ ಭಾನುವಾರ (ಎ.30 ರಂದು) ಆತ್ಮಹತ್ಯೆ ಮಾಡಿಕೊಂಡಿರುವುದು ವರದಿಯಾಗಿದೆ.
ಸಾಕಷ್ಟು ಸಾಲ ಮಾಡಿಕೊಂಡಿದ್ದ ಅವರಿಗೆ ಹಣವನ್ನು ಮರಳಿ ನೀಡಲು ಸಾಧ್ಯವಾಗಿಲ್ಲ. ಈ ಕಾರಣಕ್ಕೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸಾಯುವುದಕ್ಕೂ ಮುನ್ನ ಅವರು ಕುಟುಂಬದವರ ಬಳಿ ಹಾಗೂ ಫ್ಯಾನ್ಸ್ ಬಳಿ ಕ್ಷಮೆ ಕೇಳಿದ್ದಾರೆ. ಅಭಿಮಾನಿಗಳು, ಚಿತ್ರರಂಗದವರು ಚೈತನ್ಯ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ.
ಚೈತನ್ಯ ಅವರು ಸಾಯುವುದಕ್ಕೂ ಮುನ್ನ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ವಿಡಿಯೋ ಒಂದನ್ನು ಶೇರ್ ಮಾಡಿಕೊಂಡಿದ್ದರು. ಈ ವಿಡಿಯೋದಲ್ಲಿ ಅವರು ತಮ್ಮ ಸಾವಿಗೆ ಕಾರಣ ತಿಳಿಸಿದ್ದಾರೆ.
ಯಾವುದೇ ಸಮಸ್ಯೆಗಳನ್ನು ಎದುರಿಸಲು ಬಿಡದೆ ಅಪ್ಪ, ಅಮ್ಮ ಮತ್ತು ಸಹೋದರಿ ನನ್ನನ್ನು ಚೆನ್ನಾಗಿ ನೋಡಿಕೊಂಡರು. ನನ್ನ ಎಲ್ಲಾ ಸ್ನೇಹಿತರಿಗೆ ಪ್ರಾಮಾಣಿಕ ಕ್ಷಮೆಯಾಚಿಸುತ್ತೇನೆ. ನಾನು ಅನೇಕ ಜನರಿಗೆ ತೊಂದರೆ ನೀಡಿದ್ದೇನೆ. ಅವರೆಲ್ಲರ ಬಳಿ ಕ್ಷಮೆಯಾಚಿಸುತ್ತೇನೆ. ಹಣದ ವಿಷಯದಲ್ಲಿ ನಾನು ನನ್ನ ಒಳ್ಳೆಯತನವನ್ನು ಕಳೆದುಕೊಂಡೆ. ಕೇವಲ ಸಾಲ ತೆಗೆದುಕೊಳ್ಳುವುದು ಮಾತ್ರವಲ್ಲ, ಅದನ್ನು ಮರುಪಾವತಿಸುವ ಸಾಮರ್ಥ್ಯವನ್ನೂ ಹೊಂದಿರಬೇಕು. ಆದರೆ ನಾನು ಅದನ್ನು ಮಾಡಲು ಸಾಧ್ಯವಾಗಲಿಲ್ಲ. ನಾನು ನೆಲ್ಲೂರಿನಲ್ಲಿ ಇದ್ದೇನೆ. ಇದು ನನ್ನ ಕೊನೆಯ ದಿನ ಎಂದು ವಿಡಿಯೋದಲ್ಲಿ ಅವರು ಹೇಳಿದ್ದಾರೆ.
ಚೈತನ್ಯ ಅವರು ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತೆಲುಗಿನ ‘ಡೀ’ ಡ್ಯಾನ್ಸ್ ಶೋ ಮೂಲಕ ಅವರು ಫೇಮಸ್ ಆಗಿದ್ದರು.
ಮನುಷ್ಯನಿಗೆ ಹಣ ಮುಖ್ಯನಾ?…. ಇಲ್ಲ ಗುಣ ಮುಖ್ಯಾನಾ?……
ನಾಡ ದೇವತೆ…. ಶ್ರೀ ಚಾಮುಂಡೇಶ್ವರಿ…🙏🏻
ನಮ್ಮ ರಾಜ್ಯದ ಭವಿಷ್ಯ ಚಿಂತಾ ಜನಕವಾಗಿದೆ ಪುಗಸಟ್ಟೆ ಕೊಡುವ ಅವಾಂತರ
ನಿಮ್ಹಾನ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಅಪ್ಪ ಬರಿಮಾತಲ್ಲ ಊಹೆಗೂ ನಿಲುಕದ ಆಕಾಶ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.