ಬೆಂಗಳೂರು: ವಿರೋಧ ಪಕ್ಷಗಳ ನಾಯಕರು ಅದರಲ್ಲೂ ನಿರ್ದಿಷ್ಟವಾಗಿ ಹೆಚ್ ಡಿ ಕುಮಾರಸ್ವಾಮಿಯರು ಎತ್ತುವ ಪ್ರಶ್ನೆಗಳಿಗೆ ಪ್ರತಿದಿನ ಉತ್ತರ ಕೊಡುತ್ತಾ ಕೂರಲಾಗಲ್ಲ, ಸರ್ಕಾರ ಪ್ರಕರಣವನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ ಮತ್ತು ಎಸ್ಐಟಿ ತನ್ನ ಕೆಲಸವನ್ನು ದಕ್ಷತೆಯಿಂದ ಮಾಡುತ್ತಿದೆ ಎಂದು ಪ್ರಜ್ವಲ್ ರೇವಣ್ಣ ಪ್ರಕರಣ ಮತ್ತು ಎಸ್ಐಟಿ ತನಿಖೆ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಗೃಹ ಸಚಿವ ಜಿ ಪರಮೇಶ್ವರ್ ಈ ರೀತಿಯಾಗಿ ಪ್ರತಿಕ್ರಿಯಿಸಿದರು.
ವಕೀಲ ದೇವರಾಜೇಗೌಡ ಸಹ ಎಸ್ಐಟಿ ತನಿಖೆಯ ಬಗ್ಗೆ ಅಪಸ್ವರ ಎತ್ತಿದ್ದಾರೆ ಮತ್ತು ಅದರ ವಿರುದ್ಧ ದೂರು ಸಲ್ಲಿಸುವ ಯೋಚನೆ ಮಾಡಿದ್ದಾರೆ ಅಂತ ಹೇಳಿದ್ದಕ್ಕೆ ಅವರು, ಅವರು ದೂರು ಸಲ್ಲಿಸಲು ಮುಕ್ತರು, ಯಾರಿಗೆ ಬೇಕಾದರೂ ಸಲ್ಲಿಸಲಿ ಎಂದರು.
ಬೇರೆ ಸಂತ್ರಸ್ತೆಯರು ಯಾರಾದರು ದೂರು ನೀಡಿದ್ದಾರಾ? ಅಂತ ಕೇಳಿದ್ದಕ್ಕೆ ಗೃಹ ಸಚಿವ, ಅದು ಎಸ್ಐಟಿ ಅಧಿಕಾರಿಗಳಿಗೆ ಗೊತ್ತಿರಬಹುದಾದ ವಿಚಾರ ಮತ್ತು ಯಾರಾದರೂ ಸಂತ್ರಸ್ತೆಯರನ್ನು ಬ್ಲ್ಯಾಕ್ ಮೇಲ್ ಮಾಡಲು ಪ್ರಯತ್ನಿಸಿದರೆ ಅದನ್ನು ಸಹ ತನಿಖಾಧಿಕಾರಿಗಳು ನೋಡಿಕೊಳ್ಳುತ್ತಾರೆ ಎಂದು ಹೇಳಿದರು.
ಹಾಲ್ನೊರೆಯಂತೆ ಉಕ್ಕುತ್ತಿರುವ ದೂಧ್ ಸಾಗರ ಜಲಪಾತ
ಪುಣೆಯಲ್ಲಿ ಭಾರೀ ಮಳೆ , ಉಕ್ಕಿಹರಿಯುತ್ತಿರುವ
ಗ್ರಾಮಕ್ಕೆ ಕರೆಂಟ್ ಕೊಡಲು ಲೈನ್ ಮ್ಯಾನ್ ಹೋರಾಟ
ಸವಾಲ್ ನ್ಯೂಸ್ ಪ್ರಚಲಿತ ಸುದ್ದಿಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.