ಮನೆ ಅಪರಾಧ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೂವರ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೂವರ ಬಂಧನ

0

ಮಂಗಳೂರು(Mangalore): ಬಿಜೆಪಿ ಯುವ ಮುಖಂಡ ಸುಳ್ಯ ತಾಲ್ಲೂಕು ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು

ಇಂದು ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಏಳು ಜನರನ್ನು ಬಂಧಿಸಲಾಗಿತ್ತು. ಈಗ ಇನ್ನೂ ಮೂವರನ್ನು ಗುರುವಾರ ಬೆಳಿಗ್ಗೆ ತಲಪಾಡಿ ಚೆಕ್ ಪೋಸ್ಟ್ ಬಳಿ ಬಂಧಿಸಲಾಗಿದೆ ಎಂದರು.

ಶಿಯಾಬುದ್ದೀನ್ ಅಲಿ, ರಿಯಾಝ್ ಅಂಕತಡ್ಕ, ಸುಬ್ರಹ್ಮಣ್ಯ ಸಮೀಪದ ಎಳಿಮಲೆ‌ ನಿವಾಸಿ ಬಶೀರ್ ಬಂಧಿತ ಆರೋಪಿಗಳಾಗಿದ್ದಾರೆ.

ಬಂಧಿತರನ್ನು ನ್ಯಾಯಾಲಯದ ಎದುರು ಹಾಜರುಪಡಿಸಿ, ಪೊಲೀಸ್ ಕಸ್ಟಡಿಗೆ ಪಡೆಯಲಾಗುವುದು. ಯಾವ ಕಾರಣಕ್ಕಾಗಿ ಪ್ರವೀಣ್ ಅವರನ್ನೇ ಹತ್ಯೆ ಮಾಡಲಾಗಿದೆ ಎಂಬ ಕುರಿತು ಸಮಗ್ರ ತನಿಖೆ‌ ನಡೆಸಲಾಗುವುದು. ನಂತರ ಎನ್‌ಐಎಗೆ ಪ್ರಕರಣವನ್ನು ವಹಿಸಲಾಗುವುದು ಎಂದರು.

ಶಿಯಾಬುದ್ದೀನ್ ಸಂಸ್ಥೆಯೊಂದಕ್ಕೆ ಕೋಕೊ ಸಪ್ಲೈ ಮಾಡುತ್ತಿದ್ದ. ರಿಯಾಝ್ ಅಂಕತಡ್ಕ ಚಿಕನ್ ಸ್ಟಾಲ್‌ಗಳಿಗೆ ಕೋಳಿಗಳನ್ನು ಸಪ್ಲೈ ಮಾಡುವ ಕೆಲಸ ನಿರ್ವಹಿಸುತ್ತಿದ್ದ. ಬಶೀರ್ ಹೋಟೆಲೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಹಿಂದಿನ ಲೇಖನಮೈಸೂರು: ಗಾಳಿಗೆ ಮುರಿದು ಬಿದ್ದ ಬ್ಯಾರಿಕೇಡ್’ಗಳು
ಮುಂದಿನ ಲೇಖನಶೀಘ್ರವೇ ಮೈ ಶುಗರ್ ನಲ್ಲಿ ಕಬ್ಬು ಅರೆಯುವಿಕೆಗೆ ಚಾಲನೆ: ಸಚಿವ ಕೆ.ಗೋಪಾಲಯ್ಯ