ಮನೆ ಕಾನೂನು ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರೋಪಿಗಳ ಅವಧಿ ಪೂರ್ವ ಬಿಡುಗಡೆ: ಸುಪ್ರೀಂಕೋರ್ಟ್

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರೋಪಿಗಳ ಅವಧಿ ಪೂರ್ವ ಬಿಡುಗಡೆ: ಸುಪ್ರೀಂಕೋರ್ಟ್

0

ನವದೆಹಲಿ: ರಾಜೀವ್‌ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನ್‌ ಶ್ರೀಹರನ್‌ ಮತ್ತು ಆರ್‌.ಪಿ.ರವಿಚಂದ್ರನ್‌ ಅವರನ್ನು ಅವಧಿಗೆ ಮೊದಲೇ ಬಿಡುಗಡೆಗೊಳಿಸುವಂತೆ ಸುಪ್ರೀಂಕೋರ್ಟ್‌ ಶುಕ್ರವಾರ ಮಹತ್ತರ ಆದೇಶ ನೀಡಿದೆ.

ಇವರಿಬ್ಬರೂ ಅವಧಿಪೂರ್ವ ಬಿಡುಗಡೆಗಾಗಿ ಸುಪ್ರೀಂಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಆರ್‌.ಗವಾಯಿ ಮತ್ತು ಬಿ.ವಿ.ನಾಗರತ್ನ ಅವರಿದ್ದ ಪೀಠ, ಈ ಹಿಂದೆ ಬಿಡುಗಡೆಗೊಂಡಿದ್ದ ಎ.ಜಿ.ಪೆರರಿವಳನ್‌ ಪ್ರಕರಣದಲ್ಲಿನ ಆದೇಶವೇ ಇಲ್ಲಿಗೂ ಅನ್ವಯವಾಗುತ್ತದೆ ಎಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಳಿನಿ, ಸಂತನ್, ಮುರುಗನ್, ಎಜಿ ಪೆರಾರಿವಾಲನ್, ರಾಬರ್ಟ್ ಪಯಸ್, ಜಯಕುಮಾರ್ ಮತ್ತು ರವಿಚಂದ್ರನ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, 23 ವರ್ಷಗಳ ಕಾಲ ಜೈಲಿನಲ್ಲಿ ಕಳೆದಿದ್ದಾರೆ.

ಸಂವಿಧಾನದ ವಿಧಿ 142ರ ಅಡಿಯಲ್ಲಿನ ತನ್ನ ಪರಮಾಧಿಕಾರ ಚಲಾಯಿಸಿರುವ ಸುಪ್ರೀಂಕೋರ್ಟ್‌, ಮೇ.18ರಂದು 30 ವರ್ಷಗಳ ಕಾಲ ಜೈಲು ವಾಸ ಅನುಭವಿಸಿದ್ದ ಪೆರರಿವಳನ್‌ ಅವರ ಬಿಡುಗಡೆಗೆ ಆದೇಶಿಸಿತ್ತು.

ಮೇ.21,1991ರಂದು ತಮಿಳುನಾಡಿನ ಶ್ರೀ ಪೆರಂಬದೂರಿನ ರಾಜಕೀಯ ಸಮಾವೇಶದ ವೇಳೆ ಆತ್ಮಹತ್ಯಾ ದಾಳಿಯಲ್ಲಿ ರಾಜೀವ್‌ ಗಾಂಧಿಯವರನ್ನು ಹತ್ಯೆಗೈಯ್ಯಲಾಗಿತ್ತು.

ಹಿಂದಿನ ಲೇಖನಪಿಡಿಒಗಳ ಹುದ್ದೆ ಉನ್ನತೀಕರಿಸಿ, ವೇತನ ಹೆಚ್ಚಳ ಮಾಡಿದ ಸರ್ಕಾರ
ಮುಂದಿನ ಲೇಖನಚಾಮರಾಜೇಶ್ವರ ದೇವಾಲಯ