ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ನವದೆಹಲಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನ್ ಶ್ರೀಹರನ್ ಮತ್ತು ಆರ್.ಪಿ.ರವಿಚಂದ್ರನ್ ಅವರನ್ನು ಅವಧಿಗೆ ಮೊದಲೇ ಬಿಡುಗಡೆಗೊಳಿಸುವಂತೆ ಸುಪ್ರೀಂಕೋರ್ಟ್ ಶುಕ್ರವಾರ ಮಹತ್ತರ ಆದೇಶ ನೀಡಿದೆ.
ಇವರಿಬ್ಬರೂ ಅವಧಿಪೂರ್ವ ಬಿಡುಗಡೆಗಾಗಿ ಸುಪ್ರೀಂಕೋರ್ಟ್ಗೆ ಮನವಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ಬಿ.ವಿ.ನಾಗರತ್ನ ಅವರಿದ್ದ ಪೀಠ, ಈ ಹಿಂದೆ ಬಿಡುಗಡೆಗೊಂಡಿದ್ದ ಎ.ಜಿ.ಪೆರರಿವಳನ್ ಪ್ರಕರಣದಲ್ಲಿನ ಆದೇಶವೇ ಇಲ್ಲಿಗೂ ಅನ್ವಯವಾಗುತ್ತದೆ ಎಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಳಿನಿ, ಸಂತನ್, ಮುರುಗನ್, ಎಜಿ ಪೆರಾರಿವಾಲನ್, ರಾಬರ್ಟ್ ಪಯಸ್, ಜಯಕುಮಾರ್ ಮತ್ತು ರವಿಚಂದ್ರನ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, 23 ವರ್ಷಗಳ ಕಾಲ ಜೈಲಿನಲ್ಲಿ ಕಳೆದಿದ್ದಾರೆ.
ಸಂವಿಧಾನದ ವಿಧಿ 142ರ ಅಡಿಯಲ್ಲಿನ ತನ್ನ ಪರಮಾಧಿಕಾರ ಚಲಾಯಿಸಿರುವ ಸುಪ್ರೀಂಕೋರ್ಟ್, ಮೇ.18ರಂದು 30 ವರ್ಷಗಳ ಕಾಲ ಜೈಲು ವಾಸ ಅನುಭವಿಸಿದ್ದ ಪೆರರಿವಳನ್ ಅವರ ಬಿಡುಗಡೆಗೆ ಆದೇಶಿಸಿತ್ತು.
ಮೇ.21,1991ರಂದು ತಮಿಳುನಾಡಿನ ಶ್ರೀ ಪೆರಂಬದೂರಿನ ರಾಜಕೀಯ ಸಮಾವೇಶದ ವೇಳೆ ಆತ್ಮಹತ್ಯಾ ದಾಳಿಯಲ್ಲಿ ರಾಜೀವ್ ಗಾಂಧಿಯವರನ್ನು ಹತ್ಯೆಗೈಯ್ಯಲಾಗಿತ್ತು.