ಮನೆ ಸುದ್ದಿ ಜಾಲ ಉಕ್ರೇನ್​​ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಸಿದ್ಧತೆ: ನೋಡಲ್ ಅಧಿಕಾರಿ ನೇಮಕ; ಸಹಾಯವಾಣಿ ಆರಂಭ

ಉಕ್ರೇನ್​​ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಸಿದ್ಧತೆ: ನೋಡಲ್ ಅಧಿಕಾರಿ ನೇಮಕ; ಸಹಾಯವಾಣಿ ಆರಂಭ

0

ಬೆಂಗಳೂರುಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರುತ್ತಿದ್ದಂತೆ ಉಕ್ರೇನ್ ನಲ್ಲಿ ರಷ್ಯಾ ಯುದ್ಧ ವಿಮಾನಗಳು ಪ್ರಮುಖ ನಗರಗಳ ಮೇಲೆ ದಾಳಿ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರಿಗಾಗಿ ರಾಜ್ಯ ಸರ್ಕಾರ ಸಹಾಯವಾಣಿ ಆರಂಭಿಸಿದೆ. 

ಉಕ್ರೇನ್ ನಿಂದ ಕನ್ನಡಿಗರನ್ನು ರಕ್ಷಿಸಿ, ವಾಪಸ್​​​​ ಕರೆತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಐಎಫ್ಎಸ್ ಅಧಿಕಾರಿ ಮನೋಜ್ ರಾಜನ್​​​ರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿದೆ.ವಿದೇಶಾಂಗ ಸಚಿವಾಲಯ ಹಾಗೂ ಉಕ್ರೇನ್ ಕಿವ್​​​​​ನಲ್ಲಿನ ಭಾರತೀಯ ರಾಯಭಾರ ಕಚೇರಿ ಜೊತೆ ನೋಡಲ್ ಅಧಿಕಾರಿ ನಿರಂತರ ಸಂಪರ್ಕದಲ್ಲಿದ್ದು, ಸಮನ್ವಯ ಸಾಧಿಸಿ ಅಲ್ಲಿ ಸಿಲುಕಿಕೊಂಡಿರುವ ರಾಜ್ಯದ ಜನರನ್ನು ಕರೆತರುವ ಕೆಲಸ ಮಾಡಲಿದ್ದಾರೆ. 

24/7 ಹೆಲ್ಪ್ ಲೈನ್ ಸಂಖ್ಯೆ: 080-1070,080-22340676

[email protected], [email protected] ಮೂಲಕ ನೋಡಲ್ ಅಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ.

ಹಿಂದಿನ ಲೇಖನರಷ್ಯಾ-ಉಕ್ರೇನ್ ಸಂಘರ್ಷ: ಉಕ್ರೇನ್ ನ 137 ಮಂದಿ ಸಾವು
ಮುಂದಿನ ಲೇಖನಚೆರ್ನೋಬಿಲ್ ಪರಮಾಣು ವಿದ್ಯುತ್ ಸ್ಥಾವರ ರಷ್ಯಾ ವಶ