ಮನೆ ರಾಜ್ಯ ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು

ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು

0

ಬೆಂಗಳೂರು (Bengaluru):ಬೆಂಗಳೂರಿಗೆ ಆಗಮಿಪಿಸಿದ ರಾಷ್ಟ್ರಪತಿ ಸ್ಥಾನದ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆತ್ಮೀಯವಾಗಿ ಸ್ವಾಗತಿಸಿದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ಸೇರಿದಂತೆ ಇತರ ನಾಯಕರು ಈ ವೇಳೆ ಉಪಸ್ಥಿತರಿದ್ದರು. ವಿಮಾನ ನಿಲ್ದಾಣದಿಂದ ನಗರದ ಶಾಂಗ್ರೀಲಾ ಹೋಟೆಲ್‌ಗೆ ದ್ರೌಪದಿ ಮುರ್ಮು ತೆರಳಿದರು. ಈ ವೇಳೆ ಆದಿವಾಸಿ ಕಲಾತಂಡಗಳು ಅವರನ್ನು ಬರಮಾಡಿಕೊಂಡರು.

ಶಾಂಗ್ರೀಲಾ ಹೋಟೆಲ್‌ನಲ್ಲಿ ಮುರ್ಮು ಅವರು ಬಿಜೆಪಿ ಶಾಸಕರು, ಸಂಸದರೊಂದಿಗೆ ಸಭೆ ನಡೆಸಲಿದ್ದಾರೆ. ಅವರು ತಮ್ಮ ಪರವಾಗಿ ಮತಯಾಚನೆ ಮಾಡಲಿದ್ದಾರೆ. ಬಳಿಕ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಮಂಡ್ಯ ಸಂಸದೆ ಸುಮಲತಾ ಅವರನ್ನೂ ಭೇಟಿ ಮಾಡಿ ಬೆಂಬಲ ಕೋರುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಇದೇ ಜುಲೈ 10 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ.

ಹಿಂದಿನ ಲೇಖನಮಂಗಳೂರು: ಹೊಳೆಗೆ ಉರುಳಿದ ಕಾರು; ಇಬ್ಬರು ನಾಪತ್ತೆ
ಮುಂದಿನ ಲೇಖನಕಿಡ್ನಿ ಸ್ಟೋನ್‌ ಸಮಸ್ಯೆ ನಿವಾರಣೆಗೆ ನಿಂಬೆ ಹಣ್ಣು ಅತ್ಯುತ್ತಮ ಔಷಧ